Webdunia - Bharat's app for daily news and videos

Install App

ಡಾ ರಾಜ್ ಕುಮಾರ್ ಮರ್ಯಾದೆ ಬೀದಿಗೆ ಬಂತು, ಅಪ್ಪು ಇದ್ದಿದ್ದರೆ ಹೀಗಾಗುತ್ತಿರಲಿಲ್ಲ ಎಂದ ಫ್ಯಾನ್ಸ್

Krishnaveni K
ಮಂಗಳವಾರ, 11 ಜೂನ್ 2024 (11:37 IST)
ಬೆಂಗಳೂರು: ಯುವರಾಜ್ ಕುಮಾರ್ ವಿಚ್ಛೇದನ ವಿಚಾರವಾಗಿ ಅಭಿಮಾನಿಗಳು ಡಾ ರಾಜ್ ಕುಮಾರ್ ಕುಟುಂಬದ ಪರಿಸ್ಥಿತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದರೆ ಪುನೀತ್ ರಾಜ್ ಕುಮಾರ್ ಅವರನ್ನೂ ನೆನೆಸಿಕೊಂಡಿದ್ದಾರೆ.

ಡಾ ರಾಜ್ ಕುಟುಂಬದಲ್ಲಿ ಯಾವತ್ತೂ ಇತರರಿಗೆ ಮಾದರಿಯಾಗಿದ್ದರು. ಆದರೆ ಯುವರಾಜ್ ವಿಚಾರದಲ್ಲಿ ಲೆಕ್ಕ ತಪ್ಪಿದೆ. ಅತ್ತ ಯುವ ತನ್ನ ಪತ್ನಿ ವಿರುದ್ಧ ಅಕ್ರಮ ಸಂಬಂಧದ ಆರೋಪ ಹೊರಿಸಿದರೆ ಇತ್ತ ಶ್ರೀದೇವಿ ತನ್ನ ಪತಿ ವಿರುದ್ಧ ನಟಿಯೊಬ್ಬರೊಂದಿಗೆ ಸಂಬಂಧವಿರುವುದಾಗಿ ಆರೋಪಿಸಿದ್ದಾರೆ.

ಈ ರೀತಿಯಾಗಿ ದೊಡ್ಮನೆ ಕುಟುಂಬ ಈಗ ಅನಗತ್ಯ ವಿಚಾರಕ್ಕೆ ಸುದ್ದಿಯಾಗುತ್ತಿದೆ. ಇದನ್ನು ಗಮನಿಸಿ ಕೆಲವು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಯಾಕೋ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ದೊಡ್ಮನೆ ಕುಟುಂಬ ಬೇಡದ ವಿಚಾರಕ್ಕೇ ಸುದ್ದಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಗೀತಾ ಶಿವರಾಜ್ ಕುಮಾರ್ ಚುನಾವಣೆಗೆ ನಿಂತಾಗಲೂ ದೊಡ್ಮನೆಗೆ ರಾಜಕೀಯ  ಬೇಡವಾಗಿತ್ತು ಎಂದು ಸಾಕಷ್ಟು ಜನ ಹೇಳಿದ್ದುಂಟು. ಆದರೆ ಈಗ ಯುವರಾಜ್ ಕುಮಾರ್ ಅಕ್ರಮ ಸಂಬಂಧದ ಆರೋಪ-ಪ್ರತ್ಯಾರೋಪಗಳು ದೊಡ್ಮನೆ ಅಭಿಮಾನಿಗಳಿಗೆ ಬೇಸರ ತಂದಿದೆ. ಪುನೀತ್ ಇದ್ದಿದ್ದರೆ ಹೀಗೆ ಆಗಲು ಬಿಡುತ್ತಿರಲಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments