Webdunia - Bharat's app for daily news and videos

Install App

ಡಾ ರಾಜ್ ಕುಮಾರ್ ಮರ್ಯಾದೆ ಬೀದಿಗೆ ಬಂತು, ಅಪ್ಪು ಇದ್ದಿದ್ದರೆ ಹೀಗಾಗುತ್ತಿರಲಿಲ್ಲ ಎಂದ ಫ್ಯಾನ್ಸ್

Krishnaveni K
ಮಂಗಳವಾರ, 11 ಜೂನ್ 2024 (11:37 IST)
ಬೆಂಗಳೂರು: ಯುವರಾಜ್ ಕುಮಾರ್ ವಿಚ್ಛೇದನ ವಿಚಾರವಾಗಿ ಅಭಿಮಾನಿಗಳು ಡಾ ರಾಜ್ ಕುಮಾರ್ ಕುಟುಂಬದ ಪರಿಸ್ಥಿತಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದರೆ ಪುನೀತ್ ರಾಜ್ ಕುಮಾರ್ ಅವರನ್ನೂ ನೆನೆಸಿಕೊಂಡಿದ್ದಾರೆ.

ಡಾ ರಾಜ್ ಕುಟುಂಬದಲ್ಲಿ ಯಾವತ್ತೂ ಇತರರಿಗೆ ಮಾದರಿಯಾಗಿದ್ದರು. ಆದರೆ ಯುವರಾಜ್ ವಿಚಾರದಲ್ಲಿ ಲೆಕ್ಕ ತಪ್ಪಿದೆ. ಅತ್ತ ಯುವ ತನ್ನ ಪತ್ನಿ ವಿರುದ್ಧ ಅಕ್ರಮ ಸಂಬಂಧದ ಆರೋಪ ಹೊರಿಸಿದರೆ ಇತ್ತ ಶ್ರೀದೇವಿ ತನ್ನ ಪತಿ ವಿರುದ್ಧ ನಟಿಯೊಬ್ಬರೊಂದಿಗೆ ಸಂಬಂಧವಿರುವುದಾಗಿ ಆರೋಪಿಸಿದ್ದಾರೆ.

ಈ ರೀತಿಯಾಗಿ ದೊಡ್ಮನೆ ಕುಟುಂಬ ಈಗ ಅನಗತ್ಯ ವಿಚಾರಕ್ಕೆ ಸುದ್ದಿಯಾಗುತ್ತಿದೆ. ಇದನ್ನು ಗಮನಿಸಿ ಕೆಲವು ನೆಟ್ಟಿಗರು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ. ಯಾಕೋ ಪುನೀತ್ ರಾಜ್ ಕುಮಾರ್ ನಿಧನದ ಬಳಿಕ ದೊಡ್ಮನೆ ಕುಟುಂಬ ಬೇಡದ ವಿಚಾರಕ್ಕೇ ಸುದ್ದಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ಗೀತಾ ಶಿವರಾಜ್ ಕುಮಾರ್ ಚುನಾವಣೆಗೆ ನಿಂತಾಗಲೂ ದೊಡ್ಮನೆಗೆ ರಾಜಕೀಯ  ಬೇಡವಾಗಿತ್ತು ಎಂದು ಸಾಕಷ್ಟು ಜನ ಹೇಳಿದ್ದುಂಟು. ಆದರೆ ಈಗ ಯುವರಾಜ್ ಕುಮಾರ್ ಅಕ್ರಮ ಸಂಬಂಧದ ಆರೋಪ-ಪ್ರತ್ಯಾರೋಪಗಳು ದೊಡ್ಮನೆ ಅಭಿಮಾನಿಗಳಿಗೆ ಬೇಸರ ತಂದಿದೆ. ಪುನೀತ್ ಇದ್ದಿದ್ದರೆ ಹೀಗೆ ಆಗಲು ಬಿಡುತ್ತಿರಲಿಲ್ಲ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments