Webdunia - Bharat's app for daily news and videos

Install App

ಕೆಜಿಎಫ್ 1 ಬಂದ ಮೇಲೆ ಕನ್ನಡ ಮರೆತ್ರಿ, ಕೆಜಿಎಫ್ 2 ಬಂದ್ಮೇಲೆ ಕರ್ನಾಟಕವನ್ನೇ ಮರೀತೀರಾ? ಯಶ್ ಗೆ ತರಾಟೆ

Webdunia
ಶನಿವಾರ, 24 ಆಗಸ್ಟ್ 2019 (09:21 IST)
ಬೆಂಗಳೂರು: ಇತ್ತೀಚೆಗೆ ಸ್ಟಾರ್ ನಟ, ನಟಿಯರು ಕನ್ನಡ ವಿಚಾರಕ್ಕೆ ಆಗಾಗ ವಿವಾದದ ಕೇಂದ್ರಬಿಂದುವಾಗುತ್ತಿದ್ದಾರೆ. ಇದೀಗ ರಾಕಿಂಗ್ ಸ್ಟಾರ್ ಯಶ್ ದಂಪತಿ ಅದೇ ವಿವಾದದಲ್ಲಿ ಸಿಲುಕಿದ್ದಾರೆ.


ಯಶ್ ಮತ್ತು ರಾಧಿಕಾ ಪಂಡಿತ್ ತಮ್ಮ ಮಗುವಿನ ಕೈ ಕಾಲಿನ ಫ್ರೇಮ್ ಕಲಾಕೃತಿಯ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಸಂದೇಶ ನೀಡಿದ್ದರು. ಆದರೆ ಈ ವಿಡಿಯೋದಲ್ಲಿ ಇಬ್ಬರೂ ಇಂಗ್ಲಿಷ್ ನಲ್ಲಿ ಮಾತನಾಡಿದ್ದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಕೆಜಿಎಫ್ 1 ಬಂದು ನ್ಯಾಷನಲ್ ಲೆವೆಲ್ ನಲ್ಲಿ ಗುರುತಿಸಿಕೊಂಡ ಮೇಲೆ ಕನ್ನಡ ಮರೆತಿರಿ. ಇನ್ನು ಕೆಜಿಎಫ್ 2 ಬಂದ ಮೇಲೆ ಕನ್ನಡವನ್ನೇ ಮರೀತೀರಾ ಎಂದು ಕೆಲವರು ಕಿಡಿ ಕಾರಿದ್ದಾರೆ. ಮತ್ತೆ ಕೆಲವರು ಬೆಳೆಯುವವರೆಗೂ ಕನ್ನಡ ಬೇಕು, ಬೆಳೆದ ಮೇಲೆ ಕನ್ನಡ ಬೇಡ್ವಾ ಎಂದು ವ್ಯಂಗ್ಯ ಮಾಡಿದ್ದಾರೆ.

ಮತ್ತೆ ಕೆಲವರು ಯಶ್ ರನ್ನು ಸಮರ್ಥಿಸಿಕೊಂಡಿದ್ದು, ಯಶ್ ಗೆ ಈ ದೇಶದಾದ್ಯಂತ ಅಭಿಮಾನಿಗಳಿದ್ದಾರೆ. ಅದಕ್ಕೇ ಇಂಗ್ಲಿಷ್ ನಲ್ಲಿ ಮಾತನಾಡಿದರು. ಇಂಗ್ಲಿಷ್ ನಲ್ಲಿ ಮಾತನಾಡಿದರು ಎಂದರೆ ಕನ್ನಡ ಮರೆತರು ಎಂದು ಅರ್ಥವಲ್ಲ. ಇಷ್ಟಕ್ಕೇ ಯಾಕೆ ಏನೇನೋ ಕಾಮೆಂಟ್ ಮಾಡ್ತಿದ್ದೀರಾ ಎಂದು ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ. ಅಂತೂ ಕನ್ನಡ ವಿಷಯಕ್ಕೆ ರಾಕಿಂಗ್ ದಂಪತಿ ಈಗ ಟ್ರೋಲ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments