Webdunia - Bharat's app for daily news and videos

Install App

ರಾಹುಲ್ ದ್ರಾವಿಡ್ ಮನೆಗೇ ಹೋಗಿ ವೀಕೆಂಡ್ ವಿತ್ ರಮೇಶ್ ಗೆ ಕರ್ಕೊಂಡು ಬನ್ನಿ!

Webdunia
ಶನಿವಾರ, 20 ಏಪ್ರಿಲ್ 2019 (06:40 IST)
ಬೆಂಗಳೂರು: ಜೀ ಕನ್ನಡದಲ್ಲಿ ಪ್ರಸಾರವಾಗುವ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ನಾಲ್ಕನೇ ಸೀಸನ್ ಇಂದಿನಿಂದ ಆರಂಭವಾಗಲಿದ್ದು, ಭಾರತ ಕಂಡ ಶ್ರೇಷ್ಠ ಕ್ರಿಕೆಟಿಗ ರಾಹುಲ್ ದ್ರಾವಿಡ್ ರನ್ನು ಶೋಗೆ ಕರೆತರಲು ಇನ್ನಿಲ್ಲದ ಪ್ರಯತ್ನ ನಡೆದಿದೆ.


ದ್ರಾವಿಡ್ ರನ್ನು ಶೋಗೆ ಕರೆತರಲು ಜೀ ಕನ್ನಡ ಟ್ವಿಟರ್ ನಲ್ಲಿ #WWRDravid ಎಂಬ ಹ್ಯಾಶ್ ಟ್ಯಾಗ್ ನಲ್ಲಿ ಅಭಿಯಾನವನ್ನೇ ಶುರು ಮಾಡಿದೆ. ಈ ಟ್ವೀಟ್ ಅಭಿಯಾನಕ್ಕೆ ಕನ್ನಡಿಗರು ಮಾತ್ರವಲ್ಲದೆ ಬೇರೆ ಭಾಷೆಯ ಪ್ರೇಕ್ಷಕರು, ಅಭಿಮಾನಿಗಳಿಂದಲೂ ಪ್ರತಿಕ್ರಿಯೆಯ ಮಹಾಪೂರವೇ ಹರಿದುಬರುತ್ತಿದೆ.

ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಟ್ವಿಟರ್ ನಲ್ಲಿ ಈ ಅಭಿಯಾನಕ್ಕೆ ಕೈ ಜೋಡಿಸಿದ್ದಾರೆ. ಜತೆಗೆ ನಿರೂಪಕ ರಮೇಶ್ ಅರವಿಂದ್ ಅವರಿಗೆ ನೇರವಾಗಿ ದ್ರಾವಿಡ್ ಮನೆಗೆ ಹೋಗಿ ನೀವೇ ಅವರನ್ನು ಒಪ್ಪಿಸಿ ಕಾರ್ಯಕ್ರಮಕ್ಕೆ ಕರೆತನ್ನಿ ಎಂದು ಸಲಹೆಯನ್ನೂ ಕೊಡುತ್ತಿದ್ದಾರೆ. ಮತ್ತೆ ಕೆಲವರು ನಮಗೆ ಭಾಷೆ ಬರದಿದ್ದರೂ ದ್ರಾವಿಡ್ ಈ ಕಾರ್ಯಕ್ರಮಕ್ಕೆ ಬರುವುದನ್ನು ಎದುರು ನೋಡುತ್ತಿದ್ದೇವೆ. ಅವರ ಕತೆ ಕೇಳಲು ಉತ್ಸುಕರಾಗಿದ್ದೇವೆ. ಅವರೊಬ್ಬ ಲೆಜೆಂಡ್. ಅವರು ಕಾರ್ಯಕ್ರಮಕ್ಕೆ ಬಂದರೆ ಸಾಧಕರ ಸೀಟ್ ಗೇ ಗೌರವ ಬಂದಂತೆ ಎಂದು ಪ್ರತಿಕ್ರಿಯಿಸುತ್ತಿದ್ದಾರೆ. ಈ ಅಭಿಮಾನಿಗಳ ಕರೆಗೆ ದ್ರಾವಿಡ್ ಓಗೊಡುತ್ತಾರಾ ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments