Select Your Language

Notifications

webdunia
webdunia
webdunia
webdunia

ಸಿನಿಮಾ, ಧಾರವಾಹಿ ಮಂದಿಗೆ ಸಿಹಿ ಸುದ್ದಿ

ಸಿನಿಮಾ, ಧಾರವಾಹಿ ಮಂದಿಗೆ ಸಿಹಿ ಸುದ್ದಿ
ಬೆಂಗಳೂರು , ಶುಕ್ರವಾರ, 4 ಜೂನ್ 2021 (09:25 IST)
ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ ಸಿನಿಮಾ, ಧಾರವಾಹಿ ಮಂದಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.


ಶೂಟಿಂಗ್ ಇಲ್ಲದೇ ಈ ಕ್ಷೇತ್ರದ ಕಲಾವಿದರು, ತಂತ್ರಜ್ಞರು ನಿತ್ಯದ ಊಟಕ್ಕೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಇಂತಹ ಕಲಾವಿದರಿಗೆ ಆರ್ಥಿಕ ನೆರವು ನೀಡಬೇಕೆಂದು ಸಂಸದೆ ಸುಮಲತಾ ಅಂಬರೀಶ್ ನೇತೃತ್ವದಲ್ಲಿ ಈಗಾಗಲೇ ಸಿಎಂಗೆ ಮನವಿ ಸಲ್ಲಿಸಲಾಗಿತ್ತು.

ಆ ಮನವಿಗೆ ಸ್ಪಂದಿಸಿರುವ ಸಿಎಂ ನಿನ್ನೆ ಘೋಷಿಸಿರುವ 500 ಕೋಟಿ ರೂ.ಗಳ ಆರ್ಥಿಕ ಪ್ಯಾಕೇಜ್ ನಲ್ಲಿ ಕಲಾವಿದರಿಗೂ ಆರ್ಥಿಕ ನೆರವು ನೀಡುವುದಾಗಿ ಹೇಳಿದ್ದಾರೆ. ಈಗಾಗಲೇ ಸಂಕಷ್ಟದಲ್ಲಿರುವ ಸಿನಿಮಾ, ಧಾರವಾಹಿ ಮಂದಿಗೆ ಇದು ಸಿಹಿ ಸುದ್ದಿ.

Share this Story:

Follow Webdunia kannada

ಮುಂದಿನ ಸುದ್ದಿ

ಕನ್ನಡಕ್ಕೆ ಗೂಗಲ್ ನಲ್ಲಿ ಅವಮಾನ: ಒಗ್ಗಟ್ಟಾದ ಕಲಾವಿದರು