Webdunia - Bharat's app for daily news and videos

Install App

ಕಿಚ್ಚ ಸುದೀಪ್ ಫ್ಯಾನ್ಸ್ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿತು

Krishnaveni K
ಗುರುವಾರ, 29 ಆಗಸ್ಟ್ 2024 (09:35 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿದೆ. ಸುದೀಪ್ ಅಭಿಮಾನಿಗಳಿಗೆ ಇಂದು ಅನೂಪ್ ಭಂಡಾರಿ ಭರ್ಜರಿ ಸುದ್ದಿ ಕೊಡಲಿದ್ದಾರೆ.

ವಿಕ್ರಾಂತ್ ರೋಣ ಬಳಿಕ ಸುದೀಪ್ ಜೊತೆಗೆ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಂದು ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಈ ಸಿನಿಮಾಗೆ ಬಿಲ್ಲ ರಂಗ ಭಾಷ ಎನ್ನುವ ಟೈಟಲ್ ಕೂಡಾ ಘೋಷಣೆ ಮಾಡಿದ್ದರು. ಆದರೆ ಅದಾದ ಬಳಿಕ ಅವರು ಸೈಲೆಂಟ್ ಆಗಿದ್ದರು. ಹೀಗಾಗಿ ಅಭಿಮಾನಿಗಳು ಎಲ್ಲೇ ಹೋದರೂ ಈ ಸಿನಿಮಾ ಬಗ್ಗೆ ಕೇಳುತ್ತಲೇ ಇದ್ದರು.

ಇದೀಗ ಅಭಿಮಾನಿಗಳ ಬಹು ದಿನಗಳ ಕಾಯುತ್ತಿದ್ದ ಗಳಿಗೆ ಬಂದೇ ಬಿಟ್ಟಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಬಿಲ್ಲ ರಂಗ ಭಾಷ ಸಿನಿಮಾ ಬಗ್ಗೆ ಮಹತ್ವದ ವಿಚಾರವೊಂದನ್ನು ಹೇಳುವುದಾಗಿ ಅನೂಪ್ ಭಂಡಾರಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೇ ಹೊತ್ತಿನಲ್ಲಿ ಹೊಸ ಸಿನಿಮಾ ಸುದ್ದಿ ಬರುತ್ತಿದೆ. ಇದರ ನಡುವೆ ಸುದೀಪ್ ಈಗಷ್ಟೇ ಮ್ಯಾಕ್ಸ್ ಸಿನಿಮಾ ಮುಗಿಸಿದ್ದು ಅದು ಇನ್ನೇನು ಬಿಡುಗಡೆಯಾಗಬೇಕಿದೆ. ಮುಂದಿನ ತಿಂಗಳು ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನಡುವೆ ಮತ್ತೊಂದು ಸಿನಿಮಾ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments