Webdunia - Bharat's app for daily news and videos

Install App

ಕಿಚ್ಚ ಸುದೀಪ್ ಫ್ಯಾನ್ಸ್ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿತು

Krishnaveni K
ಗುರುವಾರ, 29 ಆಗಸ್ಟ್ 2024 (09:35 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಆ ಗಳಿಗೆ ಇಂದು ಬಂದೇ ಬಿಟ್ಟಿದೆ. ಸುದೀಪ್ ಅಭಿಮಾನಿಗಳಿಗೆ ಇಂದು ಅನೂಪ್ ಭಂಡಾರಿ ಭರ್ಜರಿ ಸುದ್ದಿ ಕೊಡಲಿದ್ದಾರೆ.

ವಿಕ್ರಾಂತ್ ರೋಣ ಬಳಿಕ ಸುದೀಪ್ ಜೊತೆಗೆ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಂದು ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಈ ಸಿನಿಮಾಗೆ ಬಿಲ್ಲ ರಂಗ ಭಾಷ ಎನ್ನುವ ಟೈಟಲ್ ಕೂಡಾ ಘೋಷಣೆ ಮಾಡಿದ್ದರು. ಆದರೆ ಅದಾದ ಬಳಿಕ ಅವರು ಸೈಲೆಂಟ್ ಆಗಿದ್ದರು. ಹೀಗಾಗಿ ಅಭಿಮಾನಿಗಳು ಎಲ್ಲೇ ಹೋದರೂ ಈ ಸಿನಿಮಾ ಬಗ್ಗೆ ಕೇಳುತ್ತಲೇ ಇದ್ದರು.

ಇದೀಗ ಅಭಿಮಾನಿಗಳ ಬಹು ದಿನಗಳ ಕಾಯುತ್ತಿದ್ದ ಗಳಿಗೆ ಬಂದೇ ಬಿಟ್ಟಿದೆ. ಇಂದು ಬೆಳಿಗ್ಗೆ 10 ಗಂಟೆಗೆ ಬಿಲ್ಲ ರಂಗ ಭಾಷ ಸಿನಿಮಾ ಬಗ್ಗೆ ಮಹತ್ವದ ವಿಚಾರವೊಂದನ್ನು ಹೇಳುವುದಾಗಿ ಅನೂಪ್ ಭಂಡಾರಿ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ.

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಶುರುವಾಗಿದ್ದು, ಇದೇ ಹೊತ್ತಿನಲ್ಲಿ ಹೊಸ ಸಿನಿಮಾ ಸುದ್ದಿ ಬರುತ್ತಿದೆ. ಇದರ ನಡುವೆ ಸುದೀಪ್ ಈಗಷ್ಟೇ ಮ್ಯಾಕ್ಸ್ ಸಿನಿಮಾ ಮುಗಿಸಿದ್ದು ಅದು ಇನ್ನೇನು ಬಿಡುಗಡೆಯಾಗಬೇಕಿದೆ. ಮುಂದಿನ ತಿಂಗಳು ಮ್ಯಾಕ್ಸ್ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಈ ನಡುವೆ ಮತ್ತೊಂದು ಸಿನಿಮಾ ಸುದ್ದಿ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments