Webdunia - Bharat's app for daily news and videos

Install App

Mohanlal: ಹಿಂದೂಗಳಿಗೆ ಅವಮಾನ: ಕೊನೆಗೂ ಕ್ಷಮೆ ಯಾಚಿಸಿದ ಎಂಪುರಾನ್ ನಟ ಮೋಹನ್ ಲಾಲ್

Krishnaveni K
ಸೋಮವಾರ, 31 ಮಾರ್ಚ್ 2025 (12:27 IST)
ಕೊಚ್ಚಿ: ಇತ್ತೀಚೆಗಷ್ಟೇ ಬಿಡುಗಡೆಯಾದ ಮಲಯಾಳಂನ ಎಂಪುರಾನ್ ಸಿನಿಮಾದಲ್ಲಿ ಹಿಂದೂಗಳು ಮತ್ತು ಬಲಪಂಥೀಯರಿಗೆ ನೋವಾಗುವ ಅಂಶಗಳಿವೆ ಎಂಬ ಕಾರಣಕ್ಕೆ ವಿವಾದವಾಗಿತ್ತು. ಇದೀಗ ಕೊನೆಗೂ ಸಿನಿಮಾದ ದೃಶ್ಯಗಳಿಗೆ ಸಂಬಂಧಪಟ್ಟಂತೆ ನಾಯಕ ನಟ ಮೋಹನ್ ಲಾಲ್ ಕ್ಷಮೆ ಯಾಚಿಸಿದ್ದಾರೆ.

ಪೃಥ್ವಿರಾಜ್ ಸುಕುಮಾರ್ ನಿರ್ದೇಶನದ ಎಂಪುರಾನ್ ಸಿನಿಮಾದಲ್ಲಿ ರಾಜಕೀಯ ವಿಚಾರಗಳನ್ನು ತೋರಿಸುವಾಗ ಹಿಂದೂಗಳನ್ನು ವಿಲನ್ ಮತ್ತು ಮುಸ್ಲಿಮರನ್ನು ಸಂತ್ರಸ್ತರಾಗಿ ತೋರಿಸಲಾಗಿದೆ ಎಂಬ ಆಕ್ಷೇಪ ಕೇಳಿಬಂದಿದೆ. ಸಿನಿಮಾದ ಕೆಲವು ದೃಶ್ಯಗಳ ಬಗ್ಗೆ ಸ್ವತಃ ಮೋಹನ್ ಲಾಲ್ ಕಟ್ಟಾ ಅಭಿಮಾನಿಗಳೇ ಬೇಸರ ವ್ಯಕ್ತಪಡಿಸಿದ್ದರು.

ಇದರ ಬೆನ್ನಲ್ಲೇ ಮೋಹನ್ ಲಾಲ್ ಕ್ಷಮೆ ಯಾಚಿಸಿದ್ದು, ನನ್ನ ಸಿನಿಮಾದಲ್ಲಿ ಯಾವುದೇ ಒಂದು ಸಮುದಾಯ ಅಥವಾ ರಾಜಕೀಯ, ಸಿದ್ಧಾಂತಗಳಿಗೆ ನೋವಾಗುವ ರೀತಿ ದೃಶ್ಯಗಳಿರದಂತೆ ನೋಡಿಕೊಳ್ಳುವುದು ನನ್ನ ಜವಾಬ್ಧಾರಿಯಾಗಿದೆ. ಆದರೆ ಎಂಪುರಾನ್ ಸಿನಿಮಾದಲ್ಲಿ ಕೆಲವೊಂದು ದೃಶ್ಯಗಳು ನನ್ನನ್ನು ಇಷ್ಟಪಡುವ ಕೆಲವರಿಗೆ ನೋವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ನಾವು ಈ ಕೆಲವು ದೃಶ್ಯಗಳಿಗೆ ಕತ್ತರಿ ಹಾಕಲು ತೀರ್ಮಾನಿಸಿದ್ದೇವೆ’ ಎಂದಿದ್ದಾರೆ.

ಮೋಹನ್ ಲಾಲ್ ಹೇಳಿಕೆ ಬೆನ್ನಲ್ಲೇ ಚಿತ್ರತಂಡ ಕೆಲವೊಂದು ವಿವಾದಾತ್ಮಕ ದೃಶ್ಯಗಳಿಗೆ ಕತ್ತರಿ ಹಾಕಿದ್ದು ಇಂದಿನಿಂದ ಹೊಸ ವರ್ಷನ್ ಎಂಪುರಾನ್ ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments