Webdunia - Bharat's app for daily news and videos

Install App

ಪತಿ ದರ್ಶನ್ ಭೇಟಿ ಮಾಡಲು ಕೊನೆಗೂ ಠಾಣೆಗೆ ಬಂದ ವಿಜಯಲಕ್ಷ್ಮಿ

Krishnaveni K
ಬುಧವಾರ, 19 ಜೂನ್ 2024 (13:42 IST)
Photo Credit: Facebook
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ಪತಿ ದರ್ಶನ್ ರನ್ನು ನೋಡಲು ಕೊನೆಗೂ ಪತ್ನಿ ವಿಜಯಲಕ್ಷ್ಮಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಬಂದಿದ್ದಾರೆ.

ದರ್ಶನ್ ಬಂಧನವಾಗಿ ಎಂಟು ದಿನ ಕಳೆದರೂ ಇದುವರೆಗೆ ಅವರ ಕುಟುಂಬದ ಕಡೆಯಿಂದ ಯಾರೂ ಪೊಲೀಸ್ ಠಾಣೆಗೆ ಬಂದಿರಲಿಲ್ಲ ಎಂಬುದು ಎಲ್ಲರ ಅಚ್ಚರಿಗೆ ಕಾರಣವಾಗಿತ್ತು.ಇದಕ್ಕೆ ದರ್ಶನ್ ತಮ್ಮ ತಾಯಿ, ಸಹೋದರನ ಜೊತೆಗಿನ ವೈಮನಸ್ಯ ಕಾರಣ ಎನ್ನಲಾಗಿತ್ತು.

ಆದರೆ ಇದೀಗ ಕೊನೆಗೂ ವಿಜಯಲಕ್ಷ್ಮಿ ಠಾಣೆಗೆ ಬಂದಿದ್ದಾರೆ. ಆದರೆ ಪೊಲೀಸರ ಸೂಚನೆ ಮೇರೆಗೆ ಅವರು ಠಾಣೆಗೆ ಬಂದಿದ್ದಾರೆ. ರೇಣುಕಾಸ್ವಾಮಿ ಹತ್ಯೆ ನಡೆದ ಬಳಿಕ ದರ್ಶನ್ ಸೀದಾ ವಿಜಯಲಕ್ಷ್ಮಿ ಇರುವ ಚೆನ್ನಮ್ಮನಕೆರೆ ಅಚ್ಚುಕಟ್ಟು ಪ್ರದೇಶದಲ್ಲಿರುವ ಅಪಾರ್ಟ್ ಮೆಂಟ್ ಗೆ ತೆರಳಿದ್ದರು. ಅಲ್ಲಿ ಅವರು ಬಟ್ಟೆ ಬದಲಾಯಿಸಿದ್ದಲ್ಲದೆ, ಶೂ ಕೂಡಾ ಅಲ್ಲಿಯೇ ಬಿಟ್ಟಿದ್ದರು. ಇದೆಲ್ಲವನ್ನೂ ಪೊಲೀಸರು ಅಲ್ಲಿಗೆ ತೆರಳಿ ವಶಪಡಿಸಿಕೊಂಡಿದ್ದಾರೆ.

ಹೀಗಾಗಿ ವಿಜಯಲಕ್ಷ್ಮಿಯನ್ನು ಹೆಚ್ಚಿನ ವಿಚಾರಣೆಗೆ ಇಂದು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅದರಂತೆ ವಿಜಯಲಕ್ಷ್ಮಿ ಠಾಣೆಗೆ ಬಂದು ದರ್ಶನ್ ಕುರಿತು ಹೇಳಿಕೆ ನೀಡಿದ್ದಾರೆ. ಈ  ವೇಳೆ ದರ್ಶನ್ ಗೆ ಅಗತ್ಯ ವಸ್ತುಗಳನ್ನೂ ಅವರು ತಂದುಕೊಟ್ಟಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments