Webdunia - Bharat's app for daily news and videos

Install App

ಇಳಯರಾಜ ಅವರಿಗಾಗಿ ಚೆನ್ನೈಗೆ ತೆರಳಿದ ಗೇಮ್ ಸಿನಿಮಾ ತಂಡ

Webdunia
ಗುರುವಾರ, 25 ಫೆಬ್ರವರಿ 2016 (12:13 IST)
ಮೊನ್ನೆಯಷ್ಟೇ ಕನ್ನಡದ ಗೇಮ್ ಸಿನಿಮಾದ ಆಡಿಯೋ ಲಾಂಚ್ ಆಗಿದೆ. ಅಂದ್ಹಾಗೆ ಸಿನಿಮಾ ತಂಡ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದರು. ಆದ್ರೆ ಕೊನೆ ಕ್ಷಣದಲ್ಲಿ ಅವರು ಅದನ್ನು ಚೆನ್ನೈಗೆ ವರ್ಗಾಯಿಸಿದ್ದರು. 
 
ಕನ್ನಡದಲ್ಲಿ ಎ.ಎಂ.ಆರ್ ರಮೇಶ್ ನಿರ್ದೇಶಿಸುತ್ತಿರುವ ಸಿನಿಮಾ ಗೇಮ್. ಕನ್ನಡ ಹಾಗೇ ತಮಿಳಿನಲ್ಲಿ ಏಕಕಾಲದಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಕ್ಕೆ ದಕ್ಷಿಣಭಾರತದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಸಂಗೀತ ಸಂಯೋಜಿಸುತ್ತಿದ್ದಾರೆ. ಇಳಯರಾಜ ಅವರು ಮ್ಯೂಸಿಕ್ ಕಂಪೋಸ್ ಮಾಡುತ್ತಿರುವ 1001ನೇ ಸಿನಿಮಾ ಗೇಮ್ . ಈ ಸಿನಿಮಾದ ಆಡಿಯೋ ರಿಲೀಸ್ ಕಾರ್ಯಕ್ರಮವನ್ನು ಸಿನಿಮಾ ತಂಡ ಬೆಂಗಳೂರಿನಲ್ಲಿ ಆಯೋಜಿಸಿತ್ತು.ಆದ್ರೆ ಅನಾರೋಗ್ಯದಿಂದಾಗಿ ಇಳಯರಾಜ ಅವರಿಗೆ ಬೆಂಗಳೂರಿಗೆ ಬರೋದು ಕಷ್ಟವಾಗಿತ್ತು. ಹಾಗಾಗಿ ಚೆನ್ನೈಗೆ ಹೋಗಿ ಸಿನಿಮಾ ತಂಡ ಆಡಿಯೋ ಲಾಂಚ್ ಮಾಡಿದೆ.
 
ಗೇಮ್ ಸಿನಿಮಾದಲ್ಲಿ ಅರ್ಜುನ್ ಸರ್ಜಾ ಅವರು ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಇನ್ನು ಬಾಲಿವುಡ್ ನ ಖ್ಯಾತ ನಟಿ ಮನೀಷಾ ಕೊಯಿರಾಲ ಇದೇ ಮೊದಲ ಬಾರಿಗೆ ಕನ್ನಡ ದ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.ಇನ್ನುಳಿದಂತೆ ಆಕ್ಷಾ ಭಟ್ ಹಾಗೂ ನೇಹಾ ಸಕ್ಸೆನಾ ಕೂಡ ಪ್ರಮುಖ ಪಾತ್ರದಲ್ಲಿ ಮಿಂಚಿದ್ದಾರೆ.
 

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments