Webdunia - Bharat's app for daily news and videos

Install App

ಗಣೇಶ್ ಮತ್ತು ಎಸ್ ನಾರಾಯಣ್ ನಡುವೆ ತಿಕ್ಕಾಟ

Webdunia
ಭಾನುವಾರ, 26 ಫೆಬ್ರವರಿ 2017 (20:08 IST)
ಒಂದು ಕಾಲದಲ್ಲಿ ಕಲಾಸಾಮ್ರಾಟ್ ಎಸ್ ನಾರಾಯಣ್ ಮತ್ತು ಗಣೇಶ್ ನಡುವೆ ಒಳ್ಳೆಯ ಬಾಂಧವ್ಯ ಇತ್ತು. ಈಗ ಅದು ಸಂಪೂರ್ಣ ಹಳಸಿದೆ. ಒಬ್ಬರಿಗೊಬ್ಬರು ನೋಟೀಸ್ ಕಳುಹಿಸಿಕೊಳ್ಳುವ ಮೂಲಕ ತಮ್ಮ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ಜಗಜ್ಜಾಹೀರು ಮಾಡಿಕೊಂಡಿದ್ದಾರೆ.
 
ಮೂಲಗಳ ಪ್ರಕಾರ, ಗಣೇಶ್ ಅವರು ರೂ.75 ಲಕ್ಷ ಪರಿಹಾರಧನ ಕೊಡಬೇಕೆಂದು ನಾರಾಯಣ್‌ಗೆ ನೋಟೀಸ್ ರವಾನಿಸಿದ್ದಾರೆ. ಜಾಹೀರಾತೊಂದರಲ್ಲಿ ತಮ್ಮ ಅನುಮತಿ ಇಲ್ಲದೆ ತನ್ನ ಫೋಟೋ ಬಳಸಿಕೊಂಡಿದ್ದಾರೆ ಎಂಬುದು ಗಣೇಶ್ ಆರೋಪ. ಇದಕ್ಕೆ ತಮಗೆ ಯಾವುದೇ ಹಣ ಸಂದಾಯವಾಗಿಲ್ಲ ಎಂದು ಅವರು ನೋಟೀಸಿನಲ್ಲಿ ತಿಳಿಸಿದ್ದಾರೆ.
 
ಇದಕ್ಕೆ ಪ್ರತಿ ನೋಟೀಸ್ ಕಳುಹಿಸಿರುವ ಎಸ್ ನಾರಾಯಣ್, ತನ್ನ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ ಎಂದಿದ್ದು, ಮಾನಹಾನಿಯಾಗಿದೆ ಎಂದು ಆರೋಪಿ ರೂ.10 ಕೋಟಿ ಪರಿಹಾರಧನಕ್ಕೆ ಆಗ್ರಹಿಸಿದ್ದಾರೆ. ಒಟ್ಟಿನಲ್ಲಿ ಇಬ್ಬರೂ ನೋಟೀಸು ಪ್ರತಿ ನೋಟೀಸುಗಳಿಂದ ಸುದ್ದಿಯಾಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments