Webdunia - Bharat's app for daily news and videos

Install App

ಶಿವರಾಜ್ ಕುಮಾರ್ ಭೈರತಿ ರಣಗಲ್ ರಿಲೀಸ್ ಮುಂದೆ ಹಾಕಲು ಕಾರಣ ಹೇಳಿದ ಗೀತಕ್ಕ

Krishnaveni K
ಮಂಗಳವಾರ, 27 ಆಗಸ್ಟ್ 2024 (09:35 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರತಿ ರಣಗಲ್ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದೆ. ಇದಕ್ಕೆ ಕಾರಣವೇನೆಂದೂ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ.

ಎಲ್ಲಾ ಅಂದುಕೊಂಡಂತೇ ನಡೆದಿದ್ದರೆ ಇದೇ ತಿಂಗಳು ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಕೊನೆ ಕ್ಷಣದಲ್ಲಿ ಸಿನಿಮಾ ರಿಲೀಸ್ ಮುಂದೆ ಹಾಕಲಾಗಿದೆ. ಸಿನಿಮಾ ಕೂಡಾ ಕಂಪ್ಲೀಟ್ ಆಗಿದೆ. ಆದರೆ ದಿಡೀರ್ ಆಗಿ ಸಿನಿಮಾ ರಿಲೀಸ್ ಮುಂದೂಡಲಾಗಿದೆ.

ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿರುವ ಭೈರತಿ ರಣಗಲ್ ಎಂಬ ಮಾಸ್ ಸಿನಿಮಾ ನವಂಬರ್ 15 ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆ ಮಾಡಲಾಗಿದೆ. ಸಿನಿಮಾ ರಿಲೀಸ್ ಮುಂದೂಡಿಕೆ ಮಾಡಲು ಕಾರಣವೇನೆಂದು ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ. ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ನಮ್ಮ ಕನ್ನಡ ಸಿನಿಮಾಗಳೇ ರಿಲೀಸ್ ಆಗುತ್ತಿವೆ. ಅವರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ನಮ್ಮ ಸಿನಿಮಾ ರಿಲೀಸ್ ಮುಂದೂಡುತ್ತಿದ್ದೇವೆ ಎಂದಿದ್ದಾರೆ.

ಭೈರತಿ ರಣಗಲ್ ಸಿನಿಮಾ ಈ ಹಿಂದೆ ಶಿವಣ್ಣ ನಾಯಕರಾಗಿ ಬಿಡುಗಡೆಯಾಗಿದ್ದ ಮುಫ್ತಿ ಸಿನಿಮಾದ ಮುಂದುವರಿದ ಭಾಗ. ಮುಫ್ತಿ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು. ಇದೀಗ ಭೈರತಿ ರಣಗಲ್ ಸಿನಿಮಾದ ಮೇಲೂ ಪ್ರೇಕ್ಷಕರು ಅಪಾರ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಾರುಖ್‌ ಖಾನ್ ಪತ್ನಿ ಗೌರಿ ಒಡೆತನದ ರೆಸ್ಟೋರೆಂಟ್‌ನಲ್ಲಿ ನಕಲಿ ಪನ್ನೀರ್‌ ಬಳಕೆ, ಯೂಟ್ಯೂಬರ್‌ ಹೇಳಿದ್ದೇನು

Vincy Aloshious: ಡ್ರಗ್ಸ್ ಸೇವಿಸಿ ಅಸಭ್ಯವಾಗಿ ವರ್ತಿಸಿದ ನಟ ಶೈನ್ ಟಾಮ್ ವಿರುದ್ಧ ದೂರು ಕೊಟ್ಟ ವಿನ್ಸಿ ಅಲೋಶಿಯಸ್

Thalapathy Vijay: ಸಿನಿಮಾಗಳಲ್ಲಿ ನಮ್ಮನ್ನು ಭಯೋತ್ಪಾದಕರಂತೆ ತೋರಿಸ್ತೀರಿ: ದಳಪತಿ ವಿಜಯ್ ವಿರುದ್ಧ ಸಿಡಿದೆದ್ದ ಮುಸ್ಲಿಮರು

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

ಮುಂದಿನ ಸುದ್ದಿ
Show comments