Select Your Language

Notifications

webdunia
webdunia
webdunia
webdunia

ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್ ಕಣಕ್ಕೆ: ಕಾಂಗ್ರೆಸ್ ಪರ ಪ್ರಚಾರ ಮಾಡ್ತಾರಾ ಶಿವಣ್ಣ

Shivaraj Kumar

Krishnaveni K

ಬೆಂಗಳೂರು , ಶನಿವಾರ, 9 ಮಾರ್ಚ್ 2024 (09:06 IST)
Photo Courtesy: Twitter
ಬೆಂಗಳೂರು: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿದ್ದು ಶಿವಮೊಗ್ಗದಿಂದ ನಟ ಶಿವರಾಜ್ ಕುಮಾರ್ ಪತ್ನಿ, ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್ ಗೆ ಟಿಕೆಟ್ ಸಿಕ್ಕಿದೆ. ಈ ಹಿನ್ನಲೆಯಲ್ಲಿ ಶಿವಣ್ಣ ಚುನಾವಣಾ ಪ್ರಚಾರಕ್ಕೆ ಬರುವ ಸಾಧ್ಯತೆಯಿದೆ.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಿವರಾಜ್ ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದರು. ಅವರ ಬಾವ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಲ್ಲದೆ, ರಾಹುಲ್ ಗಾಂಧಿ ಜೊತೆಯೂ ಚುನಾವಣಾ ರಾಲಿಯಲ್ಲಿ ವೇದಿಕೆ ಹಂಚಿಕೊಂಡಿದ್ದರು. ಈ ಬಗ್ಗೆ ಕೆಲವರು ಶಿವಣ‍್ಣನ ವಿರುದ್ಧ ಟೀಕೆ ಮಾಡಿದ್ದರು.

ಡಾ.ರಾಜ್ ಕುಟುಂಬ ಮೊದಲಿನಿಂದಲೂ ಯಾವುದೋ ಒಂದು ರಾಜಕೀಯ ಪಕ್ಷದ ಜೊತೆ ಗುರುತಿಸಿಕೊಂಡವರಲ್ಲ. ಆದರೆ ಶಿವಣ್ಣ ಕಾಂಗ್ರೆಸ್ ಪ್ರಚಾರ ಮಾಡಿದ್ದಕ್ಕೆ ನಿಮಗೆ ರಾಜಕೀಯ ಬೇಡ ಎಂದು ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಮೊನ್ನೆಯಷ್ಟೇ ಪತ್ನಿ ಗೀತಾರನ್ನು ಸಂಸದೆಯಾಗಿ ನೋಡುವ ಆಸೆಯಿದೆ ಎಂದು ಶಿವಣ್ಣ ಹೇಳಿದ್ದರು.

ಹೀಗಾಗಿ ಪತ್ನಿ ಪರವಾಗಿ ಶಿವಮೊಗ್ಗದಲ್ಲಿ ಪ್ರಚಾರ ನಡೆಸುವುದಂತೂ ಖಂಡಿತಾ. ಜೊತೆಗೆ ಇತರೆ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿಯೂ ಸ್ಟಾರ್ ಕಾಂಪೈನರ್ ಆಗಿ ಕಾಣಿಸಿಕೊಂಡರೂ ಅಚ್ಚರಿಯಿಲ್ಲ. ಚುನಾವಣೆ ಸಂದರ್ಭದಲ್ಲಿ ಬೇರೆ ಬೇರೆ ರಾಜಕೀಯ ಪಕ್ಷಗಳು ಸ್ಟಾರ್ ನಟರನ್ನು ಪ್ರಚಾರಕ್ಕೆ ಕರೆತರುವುದು ಸಾಮಾನ್ಯ. ಶಿವಣ್ಣ ಕೂಡಾ ಪ್ರಚಾರ ನಡೆಸಿದರೂ ಅಚ್ಚರಿಯಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾರ್ಲಿಂಗ್ ಕೃಷ್ಣ-ಮಿಲನಾ ನಾಗರಾಜ್ ದಂಪತಿ