Select Your Language

Notifications

webdunia
webdunia
webdunia
webdunia

Gold Smuggling Case: ಡಿಜಿಪಿ ಕೆ. ರಾಮಚಂದ್ರ ರಾವ್ ಪಾತ್ರದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

Gold Smuggling Case: ಡಿಜಿಪಿ ಕೆ. ರಾಮಚಂದ್ರ ರಾವ್ ಪಾತ್ರದ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

Sampriya

ಬೆಂಗಳೂರು , ಮಂಗಳವಾರ, 25 ಮಾರ್ಚ್ 2025 (17:06 IST)
Photo Courtesy X
ಬೆಂಗಳೂರು: ಅಕ್ರಮ ಚಿನ್ನ ಸಾಗಾಣೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಪ್ರಕರಣದಲ್ಲಿ ಆಕೆಯ  ಮಲತಂದೆ ಡಿಜಿಪಿ ಕೆ ರಾಮಚಂದ್ರ ರಾವ್‌ ಪಾತ್ರದ ಬಗ್ಗೆ ತನಿಖೆ ಮುಗಿದಿದೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಡಿಜಿಪಿ ಕೆ. ರಾಮಚಂದ್ರ ರಾವ್ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಅವರು ನೇಮಿಸಿತು. ಇದೀಗ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ವಿಚಾರಣೆಯ ಫಲಿತಾಂಶಗಳ ವಿವರಗಳು ಇನ್ನೂ ತಿಳಿದುಬಂದಿಲ್ಲ.

ಮಾರ್ಚ್ 10 ರಂದು, ಪ್ರೋಟೋಕಾಲ್ ಸವಲತ್ತುಗಳ ದುರುಪಯೋಗ ಮತ್ತು ಪ್ರಕರಣದಲ್ಲಿ ಡಿಜಿಪಿ ರಾವ್ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲು ಸರ್ಕಾರ ಗುಪ್ತಾ ಅವರನ್ನು ನೇಮಿಸಿತು.

ವಿಮಾನ ನಿಲ್ದಾಣಗಳಲ್ಲಿ ಭದ್ರತಾ ತಪಾಸಣೆಗಳನ್ನು ಬೈಪಾಸ್ ಮಾಡಲು ರಾಮಚಂದ್ರ ರಾವ್ ಅವರಿಗೆ ನೀಡಲಾದ ಸವಲತ್ತುಗಳನ್ನು ಬಳಸಿಕೊಂಡು ಚಿನ್ನವನ್ನು ಕಳ್ಳಸಾಗಣೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸರ್ಕಾರವು ಮಾರ್ಚ್ 15 ರಂದು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾವ್ ಅವರನ್ನು ಕಡ್ಡಾಯ ರಜೆಯ ಮೇಲೆ ಹೋಗಲು ಆದೇಶಿಸಿತು.

Share this Story:

Follow Webdunia kannada

ಮುಂದಿನ ಸುದ್ದಿ

ಇದೇ 27ರಂದು ಸಂಸತ್‌ನಲ್ಲಿ ಛಾವಾ ಸಿನಿಮಾ ಪ್ರದರ್ಶನ: ಮೋದಿ, ಸಚಿವರಿಂದ ವೀಕ್ಷಣೆ