Webdunia - Bharat's app for daily news and videos

Install App

Gold Smuggling Case: ರನ್ಯಾ ಜಾಮೀನು ಅರ್ಜಿ ವಜಾ, ನಟಿ ಪರ ವಕೀಲರ ವಾದ ಹೀಗಿತ್ತು

Sampriya
ಶುಕ್ರವಾರ, 14 ಮಾರ್ಚ್ 2025 (19:11 IST)
ಬೆಂಗಳೂರು: ದುಬೈನಿಂದ ಅಕ್ರಮವಾಗಿ 12ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸುವಾಗ ಸಿಕ್ಕಿಬಿದ್ದ ನಟಿ ರನ್ಯಾ ರಾವ್‌ಗೆ ಜೈಲೇ ಗತಿಯಾಗಿದೆ. ರನ್ಯಾ ಸಲ್ಲಿಸಿದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಸದ್ಯ ಪರಪ್ಪನ ಅಗ್ರಹಾರದಲ್ಲಿರುವ ರನ್ಯಾ ರಾವ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಳು. ನ್ಯಾ. ವಿಶ್ವನಾಥ್ ಸಿ. ಗೌಡರ್ ಅವರು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದ್ದಾರೆ.

ಡಿಆರ್‌ಐ ಪರ ವಕೀಲರು ರನ್ಯಾಗೆ ಜಾಮೀನು ನೀಡಬಾರದು ಎಂದು ಪ್ರಬಲವಾಗಿ ವಾದ ಮಂಡಿಸಿದ್ದರು. ಈ ವಾದವನ್ನು ಕೋರ್ಟ್‌ ಪುರಸ್ಕರಿಸಿದೆ.

ನಟಿ ರನ್ಯಾ ಪರ ಹಿರಿಯ ವಕೀಲ ಕಿರಣ್ ಜವಳಿ ವಾದ ಮಂಡಿಸಿ, ಬಂಧನದ ವೇಳೆ ಡಿಆರ್‌ಐ‌ ಅಧಿಕಾರಿಗಳು ಸುಪ್ರೀಂ ಕೋರ್ಟ್ ಮಾರ್ಗಸೂಚಿ ಪಾಲನೆ ಮಾಡಿಲ್ಲ ಎಂದು ಹೇಳಿದರು. ಹೆಣ್ಣು ಎಂದೂ ನೋಡದೇ ರಾತ್ರಿಯಿಡೀ ತನಿಖೆ ಮಾಡಿ ಮಾನಸಿವಾಗಿ ಹಿಂಸೆ ನೀಡುವ ಕೆಲಸವಾಗಿದೆ.

ಅರೆಸ್ಟ್ ಮೇಮೊ ಕೂಡ ಕೊಟ್ಟಿಲ್ಲ. ಈ ಪ್ರಕರಣದಲ್ಲಿ ರನ್ಯಾ ಪಾತ್ರ ಇಲ್ಲ‌. ತನಿಖೆಗೆ ಸಹಕಾರ‌ ನೀಡುತ್ತಿದ್ದು, ಜಾಮೀನು ನೀಡುವಂತೆ ಮನವಿ ಮಾಡಿಕೊಂಡಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments