ಪೈಲ್ವಾನ್ ಪೈರಸಿ ಬಳಿಕ ಎಚ್ಚೆತ್ತುಕೊಂಡ ಗೀತಾ ಸಿನಿಮಾ ತಂಡ ಮಾಡಿದ್ದೇನು ಗೊತ್ತಾ?

Webdunia
ಮಂಗಳವಾರ, 24 ಸೆಪ್ಟಂಬರ್ 2019 (08:56 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿ ವಿವಾದ ಸ್ಯಾಂಡಲ್ ವುಡ್ ನಲ್ಲಿ ಸಂಚಲನವುಂಟು ಮಾಡಿತ್ತು. ಈ ವಿವಾದ ಇಬ್ಬರು ಘಟಾನುಘಟಿ ಸ್ಟಾರ್ ಗಳ ಮಧ್ಯೆ ಮನಸ್ತಾಪ ಹೆಚ್ಚು ಮಾಡಿತ್ತು. ಆದರೆ ಈ ವಿವಾದದ ಬಳಿಕ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಗೀತಾ ಸಿನಿಮಾ ತಂಡ ಪಾಠ ಕಲಿತಿದೆ.


ಗೀತಾ ಸಿನಿಮಾ ಇದೇ ವಾರಂತ್ಯಕ್ಕೆ ಅಂದರೆ ಸೆಪ್ಟೆಂಬರ್ 27 ರಂದು ತೆರೆಗೆ ಬರಲಿದ್ದು, ಅದಕ್ಕೂ ಮೊದಲೇ ಚಿತ್ರತಂಡ ತಮ್ಮ ಚಿತ್ರ ಪೈರಸಿಯಾಗದಂತೆ ಮಾಡಲು ಎಲ್ಲಾ ಕ್ರಮ ಕೈಗೊಂಡಿದೆ.

ಈಗಾಗಲೇ ಪ್ರಮುಖ ಆಂಟಿ ಪೈರಸಿ ಸಂಸ್ಥೆಯೊಂದಿಗೆ ಟೈ ಅಪ್ ಮಾಡಿಕೊಂಡಿರುವ ಗೀತಾ ಸಿನಿಮಾ ತಂಡ ಚಿತ್ರಬಿಡುಗಡೆ ದಿನ ಸಿನಿಮಾ ಸೋರಿಕೆಯಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಕ್ರೈಮ್ ಡಿಸಿಪಿ ರವಿಕುಮಾರ್ ಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.  ಅಷ್ಟೇ ಅಲ್ಲದೆ, ತಮ್ಮದೇ ಪ್ರತ್ಯೇಕ ತಂಡವನ್ನು ರಚಿಸಿರುವ ಚಿತ್ರತಂಡ, ಸಿನಿಮಾ ಪ್ರದರ್ಶನವಾಗುವ ಥಿಯೇಟರ್ ಗಳಲ್ಲಿ ಚೆಕಿಂಗ್ ಮಾಡಲಿದೆಯಂತೆ. ಈ ಮೂಲಕ ತಮ್ಮ ಸಿನಿಮಾ ಸೋರಿಕೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments