ಗೋಲ್ಡನ್ ಸ್ಟಾರ್ ಗಣೇಶ್ ಬರ್ತ್ ಡೇ: ಪುನೀತ್ ಮಾಡಿದ ತ್ಯಾಗದಿಂದ ಸ್ಟಾರ್ ಆದ್ರು ಗಣೇಶ್

Krishnaveni K
ಬುಧವಾರ, 2 ಜುಲೈ 2025 (09:28 IST)
Photo Credit: X
ಬೆಂಗಳೂರು: ಇಂದು ಗೋಲ್ಡನ್ ಸ್ಟಾರ್ ಗಣೇಶ್ ಜನ್ಮದಿನವಾಗಿದ್ದು ತಮ್ಮದೇಶ ಶೈಲಿಯ ಸಿನಿಮಾ ಮೂಲಕ ಫ್ಯಾಮಿಲಿ ಪ್ರೇಕ್ಷಕರಿಗೆ ಹತ್ತಿರವಾಗಿರುವ ನಟ 46 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಮಾಡಿದ ಒಂದು ತ್ಯಾಗದಿಂದ ಗಣೇಶ್ ಸ್ಟಾರ್ ಆಗಿ ಮಿಂಚಲು ಸಾಧ್ಯವಾಯಿತು.

ಗೋಲ್ಡನ್ ಸ್ಟಾರ್ ಗಣೇಶ್ ಚಿತ್ರರಂಗದಲ್ಲಿ ಸಣ್ಣ ಪುಟ್ಟ ಪಾತ್ರ ಮಾಡುತ್ತಾ ಅವಕಾಶ ಗಿಟ್ಟಿಸಿಕೊಂಡವರು. ಬಳಿಕ ಚೆಲ್ಲಾಟ ಸಿನಿಮಾ ಅವರ ವೃತ್ತಿ ಜೀವನಕ್ಕೆ ಒಂದು ತಿರುವು ನೀಡಿತು. ಈ ಸಿನಿಮಾ ಕ್ಲಿಕ್ ಆಗುವುದರ ಮೂಲಕ ಗಣೇಶ್ ಒಂದಷ್ಟು ಹೆಸರು ಮಾಡಿದರು.

ಆದರೆ ಅವರ ಅದೃಷ್ಟ ಖುಲಾಯಿಸಿದ್ದು ಸ್ಟಾರ್ ಪಟ್ಟ ನೀಡಿದ್ದು ಮುಂಗಾರು ಮಳೆ ಸಿನಿಮಾ. ಈ ಸಿನಿಮಾದ ಸ್ಕ್ರಿಪ್ಟ್ ಮೊದಲು ಯೋಗರಾಜ್ ಭಟ್ ತೋರಿಸಿದ್ದು ಪುನೀತ್ ರಾಜ್ ಕುಮಾರ್ ಅವರಿಗೆ. ಆದರೆ ಸಿನಿಮಾದ ಸ್ಕ್ರಿಪ್ಟ್ ಓದಿ ಇದನ್ನು ಯಾರಾದರೂ ಹೊಸಬರು ಮಾಡಿದರೆ ಚೆನ್ನಾಗಿರುತ್ತದೆ ಎಂದು ಪುನೀತ್ ಸೂಚಿಸಿದ್ದರಂತೆ.

ಅದೇ ಕಾರಣಕ್ಕೆ ಯೋಗರಾಜ್ ಭಟ್, ಗಣೇಶ್ ಅವರನ್ನು ಸಿನಿಮಾಗೆ ಹಾಕಿಕೊಂಡರು. ಈ ಇಲ್ಲದೇ ಹೋಗಿದ್ದರೆ ಬಹುಶಃ ಗಣೇಶ್ ಗೆ ಇಷ್ಟೊಂದು ನೇಮು-ಫೇಮು ಬರುತ್ತಿರಲಿಲ್ಲವೇನೋ. ಬಹುಶಃ ಅಂದು ಪುನೀತ್ ಈ ಸಿನಿಮಾವನ್ನು ಅವರೇ ಮಾಡಲು ಒಪ್ಪಿಕೊಂಡಿದ್ದರೆ ಗಣೇಶ್ ಗೆ ಅವಕಾಶವೂ ಸಿಗುತ್ತಿರಲಿಲ್ಲ. ಹೀಗಾಗಿ ಪುನೀತ್ ಮಾಡಿದ ತ್ಯಾಗದಿಂದ ಗಣೇಶ್ ಕ್ಲಿಕ್ ಆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ನಮಗೆ ಮಕ್ಕಳು ಬೇಡವೆಂದ ನಟಿ ಸಂಗೀತಾ ಭಟ್‌, ದಿಢೀರನೇ ಆಸ್ಪತ್ರೆಗೆ ದಾಖಲು

ಪೂರ್ಣಚಂದ್ರ ತೇಜಸ್ವಿಯವರ ಕಾದಂಬರಿ ಜುಗಾರಿ ಕ್ರಾಸ್ ಸಿನಿಮಾದಲ್ಲಿ ರಾಜ್‌ ಬಿ ಶೆಟ್ಟಿ

ಸಿನಿಮಾ ಸಕ್ಸಸ್ ಖುಷಿ ಮಧ್ಯೆ ದಿಢೀರ್ ಎಚ್ ಡಿ ದೇವೇಗೌಡರನ್ನು ಭೇಟಿಯಾದ ರಿಷಬ್

ಮುಂದಿನ ಸುದ್ದಿ
Show comments