Webdunia - Bharat's app for daily news and videos

Install App

ನಮ್ಮಿಬ್ಬರ ಸಲುಗೆ ಮತ್ತೆ ಶುರು ಎಂದ ಗೋಲ್ಡನ್ ಸ್ಟಾರ್ ಗಣೇಶ್

Webdunia
ಮಂಗಳವಾರ, 20 ಅಕ್ಟೋಬರ್ 2020 (10:10 IST)
ಮೈಸೂರು: ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯಿಸುತ್ತಿರುವ ತ್ರಿಬಲ್ ರೈಡಿಂಗ್ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿ ಪ್ರಾರಂಭವಾಗಿದೆ.


ಲಾಕ್ ಡೌನ್ ಬಳಿಕ ಗೋಲ್ಡನ್ ಗಣಿ ಅಭಿನಯಿಸುತ್ತಿರುವ ಮೊದಲ ಸಿನಿಮಾವಿದು. ಈಗಾಗಲೇ ಹೈದರಾಬಾದ್ ನಲ್ಲಿ ಹಾಡುಗಳ ಧ್ವನಿ ಮುದ್ರಣ ನಡೆಸಿರುವ ಚಿತ್ರತಂಡ ನಿನ್ನೆಯಿಂದ ಮೈಸೂರಿನಲ್ಲಿ ಚಿತ್ರೀಕರಣ ಆರಂಭಿಸಿದೆ. ಆರು ತಿಂಗಳ ಬಳಿಕ ಚಿತ್ರೀಕರಣದಲ್ಲಿ ಪಾಲ್ಗೊಂಡ ಗಣೇಶ್ ಸೋಷಿಯಲ್ ಮೀಡಿಯಾದಲ್ಲಿ ಭಾವುಕ ಸಂದೇಶ ಬರೆದುಕೊಂಡಿದ್ದಾರೆ. ನನ್ನ ಆತನ ಸಂಬಂಧ ದೇವರ ಕೊಟ್ಟ ವರ. ನಮ್ಮಿಬ್ಬರ ಸಲುಗೆಗೆ ಯಾರ ಶಾಪ ತಟ್ಟಿತ್ತೋ, ಆರು ತಿಂಗಳು ದೂರವಾದ ಬಳಿಕ  ಎದುರು ಬದಿರಾಗಿದ್ದೇವೆ. ಆತ ಬೇರಾರೂ ಅಲ್ಲ, ನನ್ನ ಬದುಕಿನ ಅಂಗ ಕ್ಯಾಮರಾ ಎಂದು ಗಣೇಶ್ ಬರೆದುಕೊಂಡಿದ್ದಾರೆ. ಈ ಸಿನಿಮಾದಲ್ಲಿ ಗಣೇಶ್ ಗೆ ನಾಯಕಿಯಾಗಿ ಜೊತೆ ಜೊತೆಯಲಿ ಧಾರವಾಹಿ ಖ್ಯಾತಿಯ ನಟಿ ಮೇಘಾ ಶೆಟ್ಟಿ ಅಭಿನಯಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments