Webdunia - Bharat's app for daily news and videos

Install App

ದರ್ಶನ್ ಅಭಿಮಾನಿಗಳಿಗೆ ಒಂದಾದ ಮೇಲೊಂದರಂತೆ ಗುಡ್ ನ್ಯೂಸ್

Krishnaveni K
ಭಾನುವಾರ, 9 ಫೆಬ್ರವರಿ 2025 (12:33 IST)
ಬೆಂಗಳೂರು: ನಟ ದರ್ಶನ್ ಹುಟ್ಟುಹಬ್ಬದ ಸಂದರ್ಭದಲ್ಲಿ ಅಭಿಮಾನಿಗಳಿಗೆ ಒಂದಾದ ಮೇಲೊಂದರಂತೆ ಗುಡ್ ನ್ಯೂಸ್ ಸಿಗುತ್ತಿದೆ. ಈ ಬಾರಿ ಡೆವಿಲ್ ಬಗ್ಗೆ ಹೊಸ ಅಪ್ ಡೇಟ್ ಬಂದಿದೆ.

ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕೆಲವು ತಿಂಗಳುಗಳ ಕಾಲ ಜೈಲು ಸೇರಿದ್ದಾಗ ಅಭಿಮಾನಿಗಳು ತೀರಾ ದುಃಖದಲ್ಲಿದ್ದರು. ಇನ್ನು, ಅವರು ಬೆನ್ನು ನೋವಿನಿಂದ ಬಳಲುತ್ತಿದ್ದ ಪರಿ ನೋಡಿ ಇನ್ನು ಸದ್ಯಕ್ಕೆ ಅವರ ಕಡೆಯಿಂದ ಸಿನಿಮಾ ಅಪ್ ಡೇಟ್ ಸಿಗದೇನೋ ಎಂಬ ಬೇಸರದಲ್ಲಿದ್ದರು.

ಆದರೆ ಇನ್ನೇನು ಅವರ ಹುಟ್ಟುಹಬ್ಬ ಬರುತ್ತಿದ್ದು ಇದೇ ದಿನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಗಲಿದೆ. ಫೆಬ್ರವರಿ 16 ಕ್ಕೆ ದರ್ಶನ್ ಹುಟ್ಟುಹಬ್ಬವಿದೆ. ಈ ದಿನ ದರ್ಶನ್ ನಾಯಕರಾಗಿರುವ ಡೆವಿಲ್ ಸಿನಿಮಾದ ಟೀಸರ್ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಕಾಟೇರದಂತಹ ಸಕ್ಸಸ್ ಸಿನಿಮಾ ಕೊಟ್ಟ ಬಳಿಕ ದರ್ಶನ್ ನಾಯಕರಾಗಿ ನಟಿಸುತ್ತಿರುವ ಮತ್ತೊಂದು ಸಿನಿಮಾ ಇದಾಗಿದೆ. ಆದರೆ ಈ ಸಿನಿಮಾ ಚಿತ್ರೀಕರಣ ಹಂತದಲ್ಲಿರುವಾಗಲೇ ದರ್ಶನ್ ಕೊಲೆ ಕೇಸ್ ನಲ್ಲಿ ಅರೆಸ್ಟ್ ಆಗಿದ್ದರು. ಈ ಬಾರಿ ಅವರು ಹುಟ್ಟುಹಬ್ಬ ನಿಮ್ಮೊಂದಿಗೆ ಆಚರಿಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳಿಗೆ ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ. ಅದಕ್ಕೆ ಕ್ಷಮೆಯನ್ನೂ ಕೇಳಿದ್ದಾರೆ. ಆದರೆ ಆ ನಿರಾಸೆ ಮರೆಸಲು ಡೆವಿಲ್ ಟೀಸರ್ ಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಣ್ಣಾವ್ರ ಜೊತೆ ವಿಷ್ಣುವರ್ಧನ್ ಎಲ್ಲರೂ ಅಂದುಕೊಂಡಿದ್ದೇ ಬೇರೆ ಇದ್ದಿದ್ದೇ ಬೇರೆ

ವಿವಾದದಿಂದಾಗಿ ಕರ್ಣ ಸೀರಿಯಲ್ ನಿಂದ ಹೊರಬಂದರಾ ಭವ್ಯಾ ಗೌಡ

ಮಾಣಿ ಜಲಾಶಯದಲ್ಲಿ ದೋಣಿ ದುರಂತ: ಕಾಂತಾರ ಚಿತ್ರತಂಡಕ್ಕೆ ಬಿಗ್ ಶಾಕ್‌

ನಿಂತೇ ಹೋಯಿತು ಎಂದು ಸುದ್ದಿಯಾಗಿದ್ದ ಸತೀಶ್ ನೀನಾಸಂ ಸಿನಿಮಾ ಶೂಟಿಂಗ್ ಪೂರ್ಣ

ವೃಕ್ಷಮಾತೆ ಸಿನಿಮಾ ತಂಡದ ವಿರುದ್ಧ ದೂರು ಕೊಟ್ಟ ಸಾಲು ಮರದ ತಿಮ್ಮಕ್ಕ ದೂರು

ಮುಂದಿನ ಸುದ್ದಿ
Show comments