Webdunia - Bharat's app for daily news and videos

Install App

ಪೇಜಾವರ ಶ್ರೀಗಳು ಕೋಳಿ ಕೊಟ್ರೆ ತಿನ್ತಾರಾ? ವಿವಾದಕ್ಕೆ ಕಾರಣವಾಯ್ತು ಹಂಸಲೇಖ ಹೇಳಿಕೆ

Webdunia
ಸೋಮವಾರ, 15 ನವೆಂಬರ್ 2021 (10:30 IST)
ಬೆಂಗಳೂರು: ಸಂಗೀತ ನಿರ್ದೇಶಕ ಹಂಸಲೇಖ ದಲಿತರ ಮನೆಗೆ ಬಲಿತರು ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ ಹೇಳಿಕೆಯೊಂದು ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.

ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಹಂಸಲೇಖ ಪೇಜಾವರ ಶ್ರೀಗಳು ದಲಿತರ ಮನೆಗೆ ಹೋಗಿ ವಾಸ್ತವ್ಯ ಹೂಡಿದ್ದಾರೆ ಎಂದು ಇತ್ತೀಚೆಗೆ ಸುದ್ದಿ ನೋಡಿದೆ. ದಲಿತರ ಮನೆಗೆ ಅವರು ಹೋಗಬಹುದು. ಆದರೆ ಪೇಜಾವರ ಶ್ರೀಗಳು ದಲಿತರ ಮನೆಗೆ ಹೋದಾಗ ಅವರು ಕೋಳಿ ಕೊಟ್ರೆ ತಿನ್ತಾರಾ? ಅಥವಾ ಕುರಿ ರಕ್ತ ಫ್ರೈ ಮಾಡಿ ಕೊಟ್ಟರೆ ತಿನ್ತಾರಾ? ಅಲ್ಲಾ ಲಿವರ್ ಫ್ರೈ ಮಾಡಿದ್ರೆ ತಿನ್ತಾರಾ?

ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರು ಬಡವರ ಮನೆಗೆ ಹೋಗಿ ವಾಸ್ತವ್ಯ ಹೂಡುವುದನ್ನು ಶುರು ಮಾಡಿದ್ದರು. ಅವರ ಹಿಂದೇ ಇತ್ತೀಚೆಗಿನ ಮಂತ್ರಿಗಳೂ ಗ್ರಾಮ ವಾಸ್ತವ್ಯ ಅಂತ ಮಾಡ್ತಾರೆ? ನನಗೆ ದಲಿತರ ಮನೆಗೆ ಬಲಿತರು ಹೋಗುವುದು ಯಾವ ದೊಡ್ಡ ವಿಷಯ ಎಂದು ಅರ್ಥವಾಗುತ್ತಿಲ್ಲ?’ ಎಂದು ವ್ಯಂಗ್ಯ ಮಾಡಿದ್ದಾರೆ.

ಆದರೆ ಹಂಸಲೇಖ ಹೇಳಿಕೆ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ. ಶ್ರೀಗಳ ಬಗ್ಗೆ ಇಂತಹಾ ಹೇಳಿಕೆ ಕೊಟ್ಟಿದ್ದು ಅವರ ಭಕ್ತರಿಗೆ ನೋವುಂಟು ಮಾಡಿದೆ. ದಲಿತರು ಯಾಕೆ ಪೇಜಾವರ ಶ್ರೀಗಳಿಗೆ ಕೋಳಿ ಕೊಡಬೇಕು? ಇಂಥಾ ಹೇಳಿಕೆ ಯಾಕೆ ಕೊಡ್ತೀರಿ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲವರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಮುಂದಿನ ಸುದ್ದಿ
Show comments