Webdunia - Bharat's app for daily news and videos

Install App

ಸರಿಗಮಪ ಲಿಟಲ್ ಚಾಂಪ್ಸ್ 14 ರಲ್ಲಿ ರಾಜೇಶ್ ಕೃಷ್ಣನ್ ಸ್ಥಾನಕ್ಕೆ ಬರಲಿರುವ ತೀರ್ಪುಗಾರರು ಯಾರು ಗೊತ್ತಾ?

Webdunia
ಶುಕ್ರವಾರ, 24 ನವೆಂಬರ್ 2017 (11:08 IST)
ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ 13 ಕಂತು ಮುಗಿಸಿರುವ ಸರಿಗಮಪ ಲಿಟಲ್ ಚಾಂಪ್ಸ್ ಕಾರ್ಯಕ್ರಮದಲ್ಲಿ ರಾಜೇಶ್ ಕೃಷ್ಣನ್ ತೀರ್ಪುಗಾರರಾಗಿದ್ದರು. ಆದರೆ 14 ನೇ ಕಂತಿಗೆ ಅವರು ತೀರ್ಪುಗಾರರಾಗಿರುವುದಿಲ್ಲ. ಅವರ ಬದಲಿಗೆ ಆ ಸ್ಥಾನಕ್ಕೆ ಬರುವವರು ಯಾರು ಗೊತ್ತಾ?
 

ಮೊದಲಿಗೆ ರಾಜೇಶ್ ಕೃಷ್ಣನ್ ಬದಲಿಗೆ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಬರುತ್ತಾರೆಂಬ ಸುದ್ದಿಗಳಿತ್ತು. ಆದರೆ ಅದೆಲ್ಲಾ ವದಂತಿಗಳಿಗೆ ತೆರೆ ಬಿದ್ದಿದ್ದು, ರಾಜೇಶ್ ಸ್ಥಾನಕ್ಕೆ ನಾದಬ್ರಹ್ಮ ಹಂಸಲೇಖಾ ತೀರ್ಪುಗಾರರಾಗುವುದು ಖಚಿತವಾಗಿದೆ.

ಹಂಸಲೇಖಾ ಇದಕ್ಕೂ ಮೊದಲೂ ಸರಿಗಮಪ ಕಾರ್ಯಕ್ರಮದ ತೀರ್ಪುಗಾರರಾಗಿ ಕೆಲಸ ಮಾಡಿದ್ದರು. ಅಷ್ಟೇ ಅಲ್ಲದೆ, ಪ್ರತೀ ಕಂತಿನ ಫೈನಲ್ ಎಪಿಸೋಡ್ ನಲ್ಲಿ ವಿಶೇಷ ಅತಿಥಿಯಾಗಿ ಕಾಣಿಸಿಕೊಳ್ಳುತ್ತಿದ್ದರು. ಇನ್ನು ಮುಂದೆ ಪ್ರತೀ ಎಪಿಸೋಡ್ ನಲ್ಲೂ ಅವರೇ ಇರಲಿದ್ದಾರೆ.

ರಾಜೇಶ್ ಕೃಷ್ಣನ್ ಈ ಕಂತಿನಲ್ಲಿ ಹೊರಗುಳಿದಿರುವುದು ಅವರ ಅಭಿಮಾನಿಗಳಿಗೆ ತೀವ್ರ ಬೇಸರ ಉಂಟು ಮಾಡಿದೆ. ಇವರ ಹೊರತಾಗಿ ವಿಜಯ್ ಪ್ರಕಾಶ್ ಮತ್ತು ಅರ್ಜುನ್ ಜನ್ಯಾ ತೀರ್ಪುಗಾರರಾಗಿ ಮುಂದುವರಿಯಲಿದ್ದು, ಅನುಶ್ರೀ ನಿರೂಪಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments