Webdunia - Bharat's app for daily news and videos

Install App

ಲೈಂಗಿಕ ಕಿರುಕುಳದ ಆರೋಪ ಹೊತ್ತ ಗಾಯಕ ರಘು ದೀಕ್ಷಿತ್ ವಿರುದ್ಧವೇ ಮಾತನಾಡಿದ ಪತ್ನಿ ಮಯೂರಿ

Webdunia
ಶುಕ್ರವಾರ, 12 ಅಕ್ಟೋಬರ್ 2018 (09:28 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಖ್ಯಾತ ಸಂಗೀತ ನಿರ್ದೇಶಕ, ಗಾಯಕ ರಘು ದೀಕ್ಷಿತ್ ಅವರ ಮೇಲೆ ತಮಿಳು ಗಾಯಕಿ ಚಿನ್ಮಯಿ ಶ್ರೀಪಾದ್ ಅವರು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದು, ಈ ಬಗ್ಗೆ ಇದೀಗ ರಘು ದೀಕ್ಷಿತ್ ಪತ್ನಿ ಮಯೂರಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.


ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ಮಯೂರಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಮಹಿಳೆಯರು ಧೈರ್ಯದಿಂದ ಮುಂದೆ ಬಂದು ಮುಕ್ತವಾಗಿ ಅನ್ಯಾಯದ ವಿರುದ್ಧ ಹೋರಾಡಬೇಕು. ಅಸಭ್ಯವಾಗಿ, ನಡೆದುಕೊಂಡವರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದಾರೆ.


ಲೈಂಗಿಕ ಕಿರುಕುಳಕ್ಕೊಳಗಾಗಿರುವ ಮಹಿಳೆಯರಿಗೆ ತಾನು  ಬೆಂಬಲ ನೀಡುವುದಾಗಿಯೂ ಹಾಗೂ ಲೈಂಗಿಕ ದೌರ್ಜನ್ಯವೆಸಗಿದವರಿಗೆ ಸರಿಯಾದ ಶಿಕ್ಷೆ ನೀಡಿ ಆ ಮೂಲಕ ಬೇರೆ ಪುರುಷರು ಪಾಠ ಕಲಿಯುವಂತಾಗಬೇಕು ಎಂದು ತಿಳಿಸಿದ್ದಾರೆ.


ಈಗಾಗಲೇ ರಘು ದೀಕ್ಷಿತ್ ಹಾಗೂ ಮಯೂರಿ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನ ಪಡೆಯುವ ನಿರ್ಧಾರ ಮಾಡಿದ್ದಾರೆ. ಈಗಾಗಲೇ ಅವರಬ್ಬರ ವಿಚ್ಛೇದನ ಪ್ರಕ್ರಿಯೆ ಜಾರಿಯಲ್ಲಿದ್ದು, ಆದಷ್ಟು ಬೇಗ ಅವರು ವಿಚ್ಛೇದನ ಪಡೆಯತ್ತಿರುವ ವಿಚಾರವನ್ನು ಸ್ವತಃ ರಘು ದೀಕ್ಷಿತ್ ಅವರೇ ತಮ್ಮ ಟ್ವಿಟ್ಟರ್ ಮೂಲಕ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ