Webdunia - Bharat's app for daily news and videos

Install App

ಕೀರ್ತಿ ಸುರೇಶ್ ಜೊತೆ ಸಿನಿಮಾ ಘೋಷಿಸಿದ ಹೊಂಬಾಳೆ ಫಿಲಂಸ್: ಕನ್ನಡಿಗರ ತರಾಟೆ

Webdunia
ಸೋಮವಾರ, 5 ಡಿಸೆಂಬರ್ 2022 (09:23 IST)
Photo Courtesy: Twitter
ಬೆಂಗಳೂರು: ಕನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಈಗ ತಮಿಳಿನಲ್ಲಿ ಸಿನಿಮಾ ನಿರ್ಮಾಣ ಮಾಡಲು ಹೊರಟಿದೆ.

ಆದರೆ ಇದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ. ಹೊಂಬಾಳೆ ಫಿಲಂಸ್ ಕೆಜಿಎಫ್ ಸಿನಿಮಾ ಬಳಿಕ ಹಲವು ಪ್ಯಾನ್ ಇಂಡಿಯಾ ಸಿನಿಮಾಗಳನ್ನು ಘೋಷಿಸಿತ್ತು. ವಿಶೇಷವೆಂದರೆ ಇವೆಲ್ಲವೂ ಪರಭಾಷೆಯದ್ದೇ ಆಗಿದೆ. ಇದಕ್ಕೆ ಮೊದಲು ಮಲಯಾಳಂ ನಟ ಫಹಾದ್ ಫಾಸಿಲ್ ಜೊತೆಗೆ ಧೂಮಂ, ಪೃಥ್ವಿರಾಜ್ ಸುಕುಮಾರನ್ ಅವರ ಟೈಸನ್ ಸಿನಿಮಾ ಘೋಷಣೆ ಮಾಡಿದೆ. ಈಗ ಕೀರ್ತಿ ಸುರೇಶ್ ಜೊತೆಗೆ ‘ರಘು ತಥಾ’ ಎಂಬ ತಮಿಳು ಸಿನಿಮಾ ಘೋಷಣೆ ಮಾಡಿದೆ. ಈ ರೀತಿ ಪರಭಾಷಾ ನಾಯಕರನ್ನೇ ಹಾಕಿಕೊಂಡು ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಿಸುತ್ತಿರುವುದು ಕನ್ನಡಿಗರ ಅಸಮಾಧಾನಕ್ಕೆ ಕಾರಣವಾಗಿದೆ.

ಬೇರೆ ಭಾಷೆಯಲ್ಲೂ ನಮ್ಮ ಕನ್ನಡ ಸಿನಿಮಾ ನಿರ್ಮಾಣ ಸಂಸ್ಥೆ ಸಿನಿಮಾ ನಿರ್ಮಿಸುತ್ತಿರುವುದು ಹೆಮ್ಮೆಯೇ. ಆದರೆ ಪ್ರತೀ ಬಾರಿಯೂ ಪರಭಾಷಿಕರಿಗೇ ಹೊಸ ಸಿನಿಮಾ ಘೋಷಿಸುತ್ತಿರುವುದೇಕೆ? ಕನ್ನಡಿಗರಿಗೆ ಯಾಕಿಲ್ಲ? ಎಂದು ಪ್ರಶ್ನಿಸಿದ್ದಾರೆ. ಇನ್ನು ಕೆಲವರು ಹೊಂಬಾಳೆ ಫಿಲಂಸ್ ಪರಭಾಷೆಯಲ್ಲೂ ಸಿನಿಮಾ ನಿರ್ಮಿಸುತ್ತಿರುವುದು ನಮಗೆ ಹೆಮ್ಮೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments