Webdunia - Bharat's app for daily news and videos

Install App

ಹೊಂಬಾಳೆ ಫಿಲಂಸ್ ನಿರ್ಮಾಣದಲ್ಲಿ ಧ್ರುವ ಸರ್ಜಾ-ನರ್ತನ್ ಸಿನಿಮಾ?

Krishnaveni K
ಭಾನುವಾರ, 7 ಜನವರಿ 2024 (12:39 IST)
ಬೆಂಗಳೂರು: ಆಕ್ಷನ್ ಸಿನಿಮಾಗಳಿಗೆ ಹೆಸರುವಾಸಿಯಾಗಿರುವ ಧ್ರುವ ಸರ್ಜಾ ಮತ್ತು ನಿರ್ದೇಶಕ ನರ್ತನ್ ಜೊತೆಯಾದರೆ ಹೇಗಿರುತ್ತದೆ? ಹೀಗೊಂದು ಸುದ್ದಿ ಇದೀಗ ಸ್ಯಾಂಡಲ್ ವುಡ್ ನಲ್ಲಿ ಹರಿದಾಡುತ್ತಿದೆ.

ಧ್ರುವ ಸರ್ಜಾ ನಾಯಕರಾಗಿ, ನರ್ತನ್ ನಿರ್ದೇಶನದ ಸಿನಿಮಾಗೆ ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಬಂಡವಾಳ ಹೂಡಲಿದೆ ಎಂಬ ಸುದ್ದಿ ಜೋರಾಗಿ ಕೇಳಿಬರುತ್ತಿದೆ.

ಈ ಮೊದಲು ನರ್ತನ್, ಯಶ್19 ಸಿನಿಮಾಗೆ ಆಕ್ಷನ್ ಕಟ್ ಹೇಳಲಿದ್ದಾರೆ ಎಂಬ ಸುದ್ದಿಯಿತ್ತು. ಆದರೆ ಯಶ್ ತಮ್ಮ ಮುಂದಿನ ಸಿನಿಮಾವನ್ನು ಮಲಯಾಳಂ ನಿರ್ದೇಶಕಿ ಗೀತು ಮೋಹನ್ ದಾಸ್ ಜೊತೆ ಮಾಡುತ್ತಿದ್ದಾರೆ. ಇದೀಗ ನರ್ತನ್ ಆಕ್ಷನ್ ಥ್ರಿಲ್ಲರ್ ಕತೆಯೊಂದನ್ನು ಧ‍್ರುವಗಾಗಿ ರೆಡಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಅಧಿಕೃತ ಸುದ್ದಿ ಬಂದಿಲ್ಲ. ಆದರೆ ಇದುವರೆಗೆ ಬಿಗ್ ಬಜೆಟ್ ಮಾಸ್ ಸಿನಿಮಾಗಳನ್ನು ನಿರ್ಮಿಸುವ ಮೂಲಕ ದೇಶದಾದ್ಯಂಥ ಗಮನ ಸೆಳೆದಿರುವ ಹೊಂಬಾಳೆ ಫಿಲಂಸ್ ಈ ಸಿನಿಮಾಗೆ ಬಂಡವಾಳ ಹೂಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೈಸೂರು ದಸರಾ ಆನೆ ಮಾವುತರ ಕುಟುಂಬಕ್ಕೆ ಕುಕ್ಕರ್ ಕೊಟ್ಟು ಊಟ ಹಾಕಿಸಿದ ವಿಜಯಲಕ್ಷ್ಮಿ ದರ್ಶನ್

ಟಾಕ್ಸಿಕ್ ಬಳಿಕ ಮತ್ತೊಂದು ಬಿಗ್ ಸ್ಟಾರ್ ಸಿನಿಮಾಗೆ ನಾಯಕಿಯಾದ ರುಕ್ಮಿಣಿ ವಸಂತ್

ದಿಡೀರ್ ಆಗಿ ಅಭಿಮಾನಿಗಳಿಗೆ ಒಂದು ಮೆಸೇಜ್ ಕೊಟ್ಟ ರಾಜ್ ಬಿ ಶೆಟ್ಟಿ

ವಿಷ್ಣುವರ್ಧನ್ ಇರುವ ಅಭಿಮಾನ್ ಸ್ಟುಡಿಯೋ ಜಾಗ ಮುಟ್ಟುಗೋಲು: ವಿವಾದಕ್ಕೆ ಟ್ವಿಸ್ಟ್

ಜೈಲು ಪಾಲಾದ ದರ್ಶನ್ ಪತ್ನಿಗೆ ಅಶ್ಲೀಲ ಕಮೆಂಟ್ಸ್‌: ವಿಜಯಲಕ್ಷ್ಮಿಗೆ ಮಹಿಳಾ ಆಯೋಗ ಅಭಯ

ಮುಂದಿನ ಸುದ್ದಿ
Show comments