Webdunia - Bharat's app for daily news and videos

Install App

ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದವರ ಕಂಪ್ಲೀಟ್ ಮಾಹಿತಿ ಬಹಿರಂಗ

Krishnaveni K
ಮಂಗಳವಾರ, 6 ಆಗಸ್ಟ್ 2024 (10:59 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ನ್ಯಾಯಾಂಗ ಬಂಧನಕ್ಕೊಳಗಾಗಿ ಒಂದೂವರೆ ತಿಂಗಳಾಗಿದೆ. ಇಷ್ಟು ದಿನದಲ್ಲಿ ಅವರನ್ನು ನೋಡಲು ಜೈಲಿಗೆ ಯಾರೆಲ್ಲಾ ಬಂದಿದ್ದಾರೆ ಎಂಬ ಮಾಹಿತಿ ಈಗ ಬಹಿರಂಗವಾಗಿದೆ.

ನಟ ದರ್ಶನ್ ಜೈಲು ಪಾಲಾದ ಬಳಿಕ ಅವರ ಆಪ್ತ ಸಿನಿಮಾ ಸ್ನೇಹಿತರು, ಕುಟುಂಬಸ್ಥರು ಹಲವರು ಅವರನ್ನು ಭೇಟಿ ಮಾಡಲು ಜೈಲಿಗೆ ಬಂದು ಹೋಗಿದ್ದಾರೆ. ಆ ಪೈಕಿ ಅವರ ಪತ್ನಿ ವಿಜಯಲಕ್ಷ್ಮಿ ನಾಲ್ಕು ಬಾರಿ ಭೇಟಿಯಾಗಿದ್ದಾರೆ. ಉಳಿದಂತೆ ಯಾರೆಲ್ಲಾ ಭೇಟಿಯಾಗಿದ್ದಾರೆ ಎಂದು ಆರ್ ಟಿಐ ಅರ್ಜಿಯಲ್ಲಿ ಮಾಹಿತಿ ಬಹಿರಂಗವಾಗಿದೆ.

ಕಳೆದ ಒಂದೂವರೆ ತಿಂಗಳಲ್ಲಿ ದರ್ಶನ್ ರನ್ನು ಜೈಲಿನಲ್ಲಿ 30 ಮಂದಿ ಭೇಟಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಪೈಕಿ ಅವರ ಪತ್ನಿ ವಿಜಯಲಕ್ಷ್ಮಿ ನಾಲ್ಕು ಬಾರಿ, ಸಹೋದರ ದಿನಕರ್ ತೂಗುದೀಪ ಮೂರು ಬಾರಿ, ನಟ ಧನ್ವೀರ್ ಎರಡು ಬಾರಿ ಭೇಟಿಯಾಗಿದ್ದಾರೆ. ತಾಯಿ ಮೀನಾ ತೂಗುದೀಪ ಒಂದು ಬಾರಿ ಭೇಟಿಯಾಗಿದ್ದಾರೆ.

ಉಳಿದಂತೆ ನಟಿ ರಕ್ಷಿತಾ ಮತ್ತು ಪ್ರೇಮ್ ದಂಪತಿ ಜೂನ್ 29 ರಂದು, ಜುಲೈ 3 ರಂದು ದರ್ಶನ್ ತಾಯಿ, ಜುಲೈ 2 ರಂದು ಸಮತಾ, ಜುಲೈ 10 ರಂದು ಸಂಬಂಧಿ ಸುಶಾಂತ, ಚಂದ್ರಶೇಖರ್, 11 ರಂದು ನಟ ಧನ್ವೀರ್, ಚಂದ್ರಶೇಖರ್, ನಾಗೇಶ್, ಸುನಿಲ್, ಶಿವಕುಮಾರ್ ಭೇಟಿ ಮಾಡಿದ್ದಾರೆ. ಜುಲೈ 19 ರಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ, ನಿರ್ದೇಶಕ ತರುಣ್ ಸುಧೀರ್, ಜುಲೈ 26 ರಂದು ನಟ ಸಾಧು ಕೋಕಿಲ ಸೇರಿದಂತೆ 30 ಮಂದಿ ಇದುವರೆಗೆ ದರ್ಶನ್ ರನ್ನು ಭೇಟಿ ಮಾಡಿರುವುದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟಿಗನ ಜತೆ ಪ್ರೀತಿಯಲ್ಲಿ ಬಿದ್ರಾ ರಶ್ಮಿಕಾ ಮಂದಣ್ಣ, ಇದಕ್ಕೆ ಕಾರಣ ಈ ಫೋಟೋ

ಈಕೆಯಾ ಮಹಾಕುಂಭಮೇಳದ ವೈರಲ್ ಹುಡುಗಿ ಅನ್ನುವಷ್ಟರ ಮಟ್ಟಿಗೆ ಬದಲಾದ ಮೊನಲಿಸಾ, Video

Mysore Sandal Soap: ತಮನ್ನಾ ಭಾಟಿಯಾರನ್ನು ವಜಾಗೊಳಿಸುವಂತೆ ಹೆಚ್ಚಿದ ಒತ್ತಾಯ

Actor Darshan: ಪವಿತ್ರಾ ಗೌಡ ಹೊಸ ಸ್ಟೇಟಸ್ ಹಿಂದಿನ ಟಾರ್ಗೆಟ್ ಯಾರು

Madenur Manu: ಗಂಡನ ಮೇಲೆ ಬಂದಿರುವ ರೇಪ್ ಕೇಸ್ ಬಗ್ಗೆ ಮಡೆನೂರು ಮನು ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments