ಜಾಮೀನು ಸಿಕ್ಕ ಸುದ್ದಿ ಕೇಳಿ ಪವಿತ್ರಾ ಗೌಡ ರಿಯಾಕ್ಷನ್ ಹೇಗಿತ್ತು ಗೊತ್ತಾ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (15:12 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರು ತಿಂಗಳಿನಿಂದ ನ್ಯಾಯಾಂಗ ಬಂಧನದಲ್ಲಿದ್ದ ಪವಿತ್ರಾ ಗೌಡಗೆ ಕೊನೆಗೂ ಜಾಮೀನು ಸಿಕ್ಕಿದೆ. ಈ ಸುದ್ದಿ ತಿಳಿಯುತ್ತಿದ್ದಂತೇ ಅವರು ಯಾವ ರೀತಿ ರಿಯಾಕ್ಟ್ ಮಾಡಿದರು ಗೊತ್ತಾ?

ಪವಿತ್ರಾ ಗೌಡ ಪ್ರಕರಣದಲ್ಲಿ ಎ1 ಆರೋಪಿಯಾಗಿದ್ದಾರೆ. ಜೂನ್ 11 ರಂದು ದರ್ಶನ್ ಜೊತೆಗೆ ಅವರೂ ಬಂಧಿತರಾಗಿದ್ದರು. 15 ದಿನಗಳ ಪೊಲೀಸ್ ಕಸ್ಟಡಿ ಬಳಿಕ ಪವಿತ್ರಾ ಕೂಡಾ ಇತರೆ ಆರೋಪಿಗಳ ಜೊತೆ ನ್ಯಾಯಾಂಗ ಬಂಧನಕ್ಕೊಳಗಾಗಿದ್ದರು. ಅದರಂತೆ ಅವರು ಕಳೆದ 6 ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇದರ ನಡುವೆ ಒಮ್ಮೆ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಇದೀಗ ಕೊನೆಗೂ ಹೈಕೋರ್ಟ್ ಪವಿತ್ರಾ, ದರ್ಶನ್, ಪ್ರದೋಷ್, ನಾಗರಾಜು, ಲಕ್ಷ್ಮಣ್, ಅನುಕುಮಾರ್ ಸೇರಿದಂತೆ ಏಳು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿದೆ. ಇದು ಪವಿತ್ರಾ ಹಾಗೂ ದರ್ಶನ್ ಇಬ್ಬರಿಗೂ ನಿರಾಳತೆ ತಂದಿದೆ.

ಜಾಮೀನು ಸಿಕ್ಕ ಸುದ್ದಿ ತಿಳಿದ ತಕ್ಷಣ ಪವಿತ್ರಾ ಸಹ ಖೈದಿಗಳೊಂದಿಗೆ ಕಣ್ಣೀರು ಹಾಕಿ ಸಂತೋಷ ವ್ಯಕ್ತಪಡಿಸಿದ್ದಾರಂತೆ. ಕೊನೆಗೂ ಆರು ತಿಂಗಳ ಜೈಲು ವಾಸಕ್ಕೆ ಬ್ರೇಕ್ ಬಿದ್ದಿರುವುದರಿಂದ ತುಂಬಾ ಸಂತೋಷಗೊಂಡರು ಎಂದು ತಿಳಿದುಬಂದಿದೆ. ಈ ಖುಷಿಯನ್ನು ಸಹ ಖೈದಿಗಳೊಂದಿಗೆ ಹಂಚಿಕೊಂಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಮುಂದಿನ ಸುದ್ದಿ
Show comments