Webdunia - Bharat's app for daily news and videos

Install App

ಸುದೀಪ್ ಆ ನೋವನ್ನು ಹೇಗೆ ತಡೆದುಕೊಳ್ತಾರೋ ಏನೋ ಅನಿಸುತ್ತಿದೆ: ಅಂತಿಮ ದರ್ಶನ ಪಡೆದ ರಾಘಣ್ಣ

Sampriya
ಭಾನುವಾರ, 20 ಅಕ್ಟೋಬರ್ 2024 (13:27 IST)
Photo Courtesy X
ಬೆಂಗಳೂರು: ನಟ ಸುದೀಪ್ ಅವರ ತಾಯಿ ಸರೋಜಾ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಜೆ.ಪಿ. ನಗರದಲ್ಲಿರುವ ಸುದೀಪ್‌ ಮನೆಗೆ ಗಣ್ಯರ ದಂಡೇ ಧಾವಿಸುತ್ತಿದೆ.

ಸ್ಯಾಂಡಲ್‌ವುಡ್‌ನ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಸುದೀಪ್‌ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ, ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ ಎಂದು ಕಂಬನಿ ಮಿಡಿದರು.

ಸುದೀಪ್ ಅವರ ತಾಯಿ, ನಮ್ಮ ತಾಯಿ ಸ್ನೇಹಿತರು. ಅವರ ಮನೆಗೆ ನಾವು ಹೋಗೋದು, ನಮ್ಮ ಮನೆಗೆ ಅವರು ಬರುತ್ತಿದ್ದರು. ನಾವು ಹೊರಗಡೆ ಹೋಗುವಾಗ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ವಿ ಎಂದರು.

ಸುದೀಪ್ ಅವರನ್ನು ನೋಡಿದ್ರೆ ತುಂಬಾ ಕಷ್ಟ ಆಗುತ್ತಿದೆ. ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ನಮಗೆ ಗೊತ್ತಿದೆ. ನಾನು ಅನುಭವಿಸಿದ್ದೇನೆ. ಸುದೀಪ್ ಆ ಕಷ್ಟ, ನೋವು ಹೇಗೆ ತಡೆದುಕೊಳ್ತಾರೋ ಏನೋ ಅನಿಸುತ್ತಿದೆ. ಈ ನೋವು ಭರಿಸುವ ಶಕ್ತಿಯನ್ನ ಅವರಿಗೆ ದೇವರು ಕೊಡಲಿ ಎಂದು ಅವರು ಹೇಳಿದರು.

ಸರೋಜಾ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ ಜೊತೆ ಪುತ್ರರಾದ ಯುವ ರಾಜ್‌ಕುಮಾರ್‌, ವಿನಯ್ ರಾಜ್‌ಕುಮಾರ್‌ ಕೂಡ ಬಂದಿದ್ದರು. ವಿಕ್ರಾಂತ್ ರೋಣ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸೇರಿ ಸಾಕಷ್ಟು ಸ್ಯಾಂಡಲ್‌ವುಡ್‌ನ ಕಲಾವಿದರು ಅಂತಿಮ ದರ್ಶನ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments