Webdunia - Bharat's app for daily news and videos

Install App

ಸುದೀಪ್ ಆ ನೋವನ್ನು ಹೇಗೆ ತಡೆದುಕೊಳ್ತಾರೋ ಏನೋ ಅನಿಸುತ್ತಿದೆ: ಅಂತಿಮ ದರ್ಶನ ಪಡೆದ ರಾಘಣ್ಣ

Sampriya
ಭಾನುವಾರ, 20 ಅಕ್ಟೋಬರ್ 2024 (13:27 IST)
Photo Courtesy X
ಬೆಂಗಳೂರು: ನಟ ಸುದೀಪ್ ಅವರ ತಾಯಿ ಸರೋಜಾ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನ ಪಡೆಯಲು ಜೆ.ಪಿ. ನಗರದಲ್ಲಿರುವ ಸುದೀಪ್‌ ಮನೆಗೆ ಗಣ್ಯರ ದಂಡೇ ಧಾವಿಸುತ್ತಿದೆ.

ಸ್ಯಾಂಡಲ್‌ವುಡ್‌ನ ಹಿರಿಯ ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಸುದೀಪ್‌ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ, ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ಗೊತ್ತಿದೆ ಎಂದು ಕಂಬನಿ ಮಿಡಿದರು.

ಸುದೀಪ್ ಅವರ ತಾಯಿ, ನಮ್ಮ ತಾಯಿ ಸ್ನೇಹಿತರು. ಅವರ ಮನೆಗೆ ನಾವು ಹೋಗೋದು, ನಮ್ಮ ಮನೆಗೆ ಅವರು ಬರುತ್ತಿದ್ದರು. ನಾವು ಹೊರಗಡೆ ಹೋಗುವಾಗ ಅವರ ಆಶೀರ್ವಾದ ಪಡೆದುಕೊಳ್ಳುತ್ತಿದ್ವಿ ಎಂದರು.

ಸುದೀಪ್ ಅವರನ್ನು ನೋಡಿದ್ರೆ ತುಂಬಾ ಕಷ್ಟ ಆಗುತ್ತಿದೆ. ಅಮ್ಮನಿಲ್ಲದ ಜೀವನ ಎಷ್ಟು ಕಷ್ಟ ಅಂತ ನಮಗೆ ಗೊತ್ತಿದೆ. ನಾನು ಅನುಭವಿಸಿದ್ದೇನೆ. ಸುದೀಪ್ ಆ ಕಷ್ಟ, ನೋವು ಹೇಗೆ ತಡೆದುಕೊಳ್ತಾರೋ ಏನೋ ಅನಿಸುತ್ತಿದೆ. ಈ ನೋವು ಭರಿಸುವ ಶಕ್ತಿಯನ್ನ ಅವರಿಗೆ ದೇವರು ಕೊಡಲಿ ಎಂದು ಅವರು ಹೇಳಿದರು.

ಸರೋಜಾ ಅಂತಿಮ ದರ್ಶನ ಪಡೆಯಲು ರಾಘವೇಂದ್ರ ರಾಜ್‌ಕುಮಾರ್ ಜೊತೆ ಪುತ್ರರಾದ ಯುವ ರಾಜ್‌ಕುಮಾರ್‌, ವಿನಯ್ ರಾಜ್‌ಕುಮಾರ್‌ ಕೂಡ ಬಂದಿದ್ದರು. ವಿಕ್ರಾಂತ್ ರೋಣ ಚಿತ್ರದ ನಿರ್ದೇಶಕ ಅನೂಪ್ ಭಂಡಾರಿ ಸೇರಿ ಸಾಕಷ್ಟು ಸ್ಯಾಂಡಲ್‌ವುಡ್‌ನ ಕಲಾವಿದರು ಅಂತಿಮ ದರ್ಶನ ಪಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments