Webdunia - Bharat's app for daily news and videos

Install App

ಆತನ ಕಷ್ಟನ ನೋಡಿ ಸಂಭ್ರಮಿಸುವ ವ್ಯಕ್ತಿ ನಾನಲ್ಲ: ದರ್ಶನ್ ಕುರಿತು ಸುದೀಪ್ ಮಾತು

Sampriya
ಭಾನುವಾರ, 15 ಸೆಪ್ಟಂಬರ್ 2024 (16:09 IST)
Photo Courtesy X
ಬೆಂಗಳೂರು: ನನ್ನ ಸ್ನೇಹಿತ ತೊಂದರೆಯಲ್ಲಿದ್ದಾಗ ಅದನ್ನು ನೋಡಿ ಖುಷಿ ಪಡುವ ವ್ಯಕ್ತಿ ನಾನಲ್ಲ ಎಂದು ಕಿಚ್ಚ ಸುದೀಪ್ ಹೇಳುವ ಮೂಲಕ ದರ್ಶನ್ ಮೇಲಿನ ಸ್ನೇಹನ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ.

ಈಚೆಗೆ ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿದ ಸುದೀಪ್ ಅವರು ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ ಬಗ್ಗೆ ಮಾತನಾಡಿದ್ದಾರೆ.

ನಮ್ಮಿಬ್ಬರ ಜಗಳ, ಸ್ಪರ್ಧೆ ವೈಯಕ್ತಿಕ. ಆ ವ್ಯಕ್ತಿಗೆ ತೊಂದರೆ ಆಗ್ತಾ ಇದೆ ಅಂದಾಗ ಅದನ್ನು ನೋಡಿ ಖುಷಿ ಪಡುವ ವ್ಯಕ್ತಿ ನಾನಲ್ಲ. ಯಾಕೆ ಹೀಗಾಯಿತು ಅನ್ನುವ ನೋವು ಅಂತಾ ಆಯಿತು. ಕೆಲವು ವ್ಯಕ್ತಿಗಳು ಮಾತನಾಡದಿದ್ರು ಪರವಾಗಿಲ್ಲ, ಆದರೆ ಕಣ್ಮುಂದೆ ಚೆನ್ನಾಗಿ ಓಡಾಡುತ್ತಿದ್ದರೆ ಸಾಕು ಎನಿಸುತ್ತದೆ ಎಂದು ಹೇಳುವ ಮೂಲಕ ದರ್ಶನ್ ಅವರ ಜೈಲು ಸೇರಿರುವ ಬಗ್ಗೆ ಪರೋಕ್ಷವಾಗಿ ನೋವು ತೋಡಿಕೊಂಡರು.

ಸುದೀಪ್ ಅವರು ಸ್ನೇಹದ ಬಗ್ಗೆ ಹೇಳಿರುವ ಈ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದರ್ಶನ್ ಹಾಗೂ ಸುದೀಪ್ ಅವರು ಮಾತು ಬಿಟ್ಟು ದಶಕಗಳ ಕಳೆದಿವೆ. ಆದರೆ ಇವರ ಅಭಿಮಾನಿಗಳು ಮಾತ್ರ ಈ ಸ್ನೇಹಿತರ ಆದಷ್ಟು ಬೇಗ ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಳ್ಳಲಿ ಎಂದು ಹಾರೈಸುತ್ತಿರುತ್ತಾರೆ.

ಇದೀಗ ದರ್ಶನ್ ಸ್ನೇಹದ ಬಗ್ಗೆ ಸುದೀಪ್ ಹೇಳಿರುವ ಮಾತುಗಳು ಅವರ ಅಭಿಮಾನಿಗಳಿಗೆ ಖುಷಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಕೋಟ್ಯಂತರ ರೂಪಾಯಿ ಬ್ಯಾಂಕ್ ವಂಚನೆ ಪ್ರಕರಣ: ನಿರ್ಮಾಪಕ ಅಲ್ಲು ಅರವಿಂದ್‌ಗೆ ಜಾರಿ ನಿರ್ದೇಶನಾಲಯ ಶಾಕ್‌

ಮಕ್ಕಳಾಗೋದಿಕ್ಕೆ ಮದುವೆಯೇ ಆಗ್ಬೇಕಾ: ನಟಿ ಭಾವನಾ ರಾಮಣ್ಣ ಪ್ರಶ್ನೆ

ಮುಂದಿನ ಸುದ್ದಿ
Show comments