Webdunia - Bharat's app for daily news and videos

Install App

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

Sampriya
ಗುರುವಾರ, 24 ಜುಲೈ 2025 (19:32 IST)
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬಹುದು ಎಂದು ನಾನು ನಂಬಿದ್ದೇನೆ. ಭಾರತದ ಸಾಮಾನ್ಯ ಪ್ರಜೆಗೂ ಸುಪ್ರೀಂ ಕೋರ್ಟ್ ಆಶಾಕಿರಣ ಎಂದು ರಮ್ಯಾ ‌ಇನ್‌ಸ್ಟಾದಲ್ಲಿ ಸ್ಟೇಟಸ್ ಹಾಕಿದ್ದು, ಚರ್ಚೆಗೆ ಕಾರಣವಾಗಿದೆ. 

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾದಾಗಲೂ ನಟಿ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿದ್ದರು. ಇದೀಗ ಸುಪ್ರೀಂ ಮೆಟ್ಟಿಲೇರಿರುವ ಪ್ರಕರಣ ಸಂಬಂಧ ರಮ್ಯಾ, ಈ ಪ್ರಕರಣದಲ್ಲಿ ಸಾಮಾನ್ಯ ಪ್ರಜೆಗೂ ನ್ಯಾಯ ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. 

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ದರ್ಶನ್, ಪವಿತ್ರ ಸೇರಿ 17 ಆರೋಪಿಗಳು ಬಂಧನವಾಗಿದ್ದರು. ಜೈಲುವಾಸದ ನಂತರ ಎಲ್ಲಾ ಆರೋಪಿಗಳು ಜಾಮೀನು ಪಡೆದು ಆಚೆ ಬಂದಿದ್ದರು. ನಟ ದರ್ಶನ್ ಸೇರಿ ಏಳು ಜನರ ಜಾಮೀನು ಪ್ರಶ್ನಿಸಿ ಪೊಲೀಸ್ ಹಾಗೂ ಸರಕಾರ ಸುಪ್ರೀಂ ಕೋರ್ಟ್‌ಗೆ ಮನವಿಯನ್ನ ಸಲ್ಲಿಸಿತ್ತು.

ಇಂದಿನ ವಿಚಾರಣೆಯಲ್ಲಿ ಸರ್ಕಾರದ ಪರ ವಕೀಲರಾದ ಸಿದ್ಧಾರ್ಥ್ ಲೂತ್ರಾ ನ್ಯಾಯಮೂರ್ತಿ ಪರ್ದಿವಾಲಾ ಅವರ ಮುಂದೆ ಸ್ಪಷ್ಟವಾಗಿ ಜಾಮೀನು ವಜಾ ಮಾಡುವ ನಿಟ್ಟಿನಲ್ಲಿ ವಾದ ಮಂಡಿಸಿದ್ದಾರೆ. ‌

ಹೈಕೋರ್ಟ್ ನೀಡಿದ ಜಾಮೀನು ಪ್ರಶ್ನಿಸಿದ ಸುಪ್ರೀಂ ಕೋರ್ಟ್ ತರಾತುರಿಯ ನಿರ್ಧಾರವನ್ನು ಮಾಡಲು ನಾವು ಒಪ್ಪುವುದಿಲ್ಲ ಎಂದು ಅಭಿಪ್ರಾಯಪಟ್ಟು ಆದೇಶವನ್ನ ಕಾಯ್ದಿರಿಸಿದ್ದಾರೆ. ಈ ಎಲ್ಲ ಬೆಳವಣಿಗಳ ಬಗ್ಗೆ ನಟಿ ರಮ್ಯಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕುಟುಂಬಕ್ಕೆ ಸುಪ್ರೀಂನಲ್ಲಿ ನ್ಯಾಯ ಸಿಗುವ ನಂಬಿಕೆಯಲ್ಲಿದ್ದೇನೆ: ನಟಿ ರಮ್ಯಾ

ಇದು ನನ್ನ ರಿಯಲ್ ಮುಖ: ಟ್ರೋಲ್‌ಗೆ ಬೇಸತ್ತು ಕೌಂಟರ್ ಕೊಟ್ಟ ಉರ್ಫಿ ಜಾವೇದ್‌

ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ನೋ ಟೆನ್ಷನ್ ಎಂದರಾ ವಿಜಯಲಕ್ಷ್ಮಿ ದರ್ಶನ್

ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌, ಪವಿತ್ರಾ ಗೌಡ ಸಂಬಂಧ ಬಗ್ಗೆ ವಕೀಲರು ಹೇಳಿದ್ದು ಹೀಗೆ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ಮುಂದಿನ ಸುದ್ದಿ
Show comments