Select Your Language

Notifications

webdunia
webdunia
webdunia
webdunia

ಪ್ರಕರಣದಲ್ಲಿ ನನ್ನನು ಸಿಲುಕಿಸಲಾಗಿದೆ, ನಾನು ನಿರ್ದೋಷಿ: ಡಿಆರ್‌ಐ ಎಡಿಜಿಗೆ ರನ್ಯಾ ಪತ್ರ

Gold Smuggling Case, Ranyaa Rao Case, DRI

Sampriya

ಬೆಂಗಳೂರು , ಶನಿವಾರ, 15 ಮಾರ್ಚ್ 2025 (16:54 IST)
ಬೆಂಗಳೂರು: ಅಕ್ರಮವಾಗಿ 12ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವೇಳೆ ಸಿಕ್ಕಿವಿದ್ದ ನಟಿ ರನ್ಯಾ ರಾವ್ ಅವರು ಇದೀಗ ಡಿಆರ್‌ಐನ ಎಡಿಜಿಗೆ ಪತ್ರ ಬರೆದಿದ್ದಾರೆ.

ಹೈಪ್ರೊಫೈಲ್ ಚಿನ್ನದ ಕಳ್ಳಸಾಗಣೆಯಲ್ಲಿ ನನ್ನನ್ನು ಸಿಲುಕಿ, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಲಾಗಿದೆ. ನನ್ನನ್ನು ವಿಮಾನ ನಿಲ್ದಾಣದ ಟರ್ಮಿನಲ್‌ನಿಂದ ಅಲ್ಲ, ವಿಮಾನದಿಂದಲೇ ನೇರವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಆಹಾರ ಮತ್ತು ನಿದ್ರೆಯನ್ನು ನಿರಾಕರಿಸಿ, ತನ್ನ ಮೇಲೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಅದಲ್ಲದೆ ಬಲವಂತವಾಗಿ ಖಾಲಿ ದಾಖಲೆಗಳಿಗೆ ಸಹಿ ಹಾಕುವಂತೆ ಒತ್ತಾಯಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ವಿಶೇಷ ನ್ಯಾಯಾಲಯವು ತನ್ನ ಜಾಮೀನು ಅರ್ಜಿಯನ್ನು ನಿರಾಕರಿಸಿದ ಒಂದು ದಿನದ ನಂತರ ಅವರ ಆರೋಪಗಳು ಬಂದಿವೆ. ರಾವ್ ಅವರ ಮಲತಂದೆ, ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಕೆ. ರಾಮಚಂದ್ರ ರಾವ್ ಅವರ ಭಾಗಿಯಾಗಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಕರ್ನಾಟಕ ಸರ್ಕಾರ ಆದೇಶಿಸಿದ್ದು, ಕಾನೂನು ಜಾರಿ ಅಧಿಕಾರಿಗಳ ಸಂಭಾವ್ಯ ಲೋಪದೋಷಗಳ ಬಗ್ಗೆ ತನಿಖೆ ನಡೆಸುತ್ತಿದೆ.

ದುಬೈನಿಂದ 14 ಕೆಜಿಗೂ ಹೆಚ್ಚು ಚಿನ್ನವನ್ನು ಕಳ್ಳಸಾಗಣೆ ಮಾಡುವಾಗ ಸಿಕ್ಕಿಬಿದ್ದ ಆರೋಪದ ನಂತರ ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ DRI ಬಂಧಿಸಿದೆ. ಆದಾಗ್ಯೂ, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಂದ ಪತ್ರದಲ್ಲಿ, ವಿಮಾನದಿಂದ ಇಳಿಯುವ ಮೊದಲು ತನ್ನನ್ನು ವಿಮಾನದೊಳಗೆ ಬಂಧಿಸಲಾಗಿತ್ತು ಎಂದು ಆರೋಪ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ನನ್ನ ಬ್ಯೂಟಿಫುಲ್ ಫ್ರೆಂಡ್‌: ಸೊಸೆ ಆಲಿಯಾಗೆ ಸ್ಪೆಷಲ್ ವಿಶ್ ಮಾಡಿದ ನೀತು ಕಪೂರ್‌