Webdunia - Bharat's app for daily news and videos

Install App

ದೇಶದ ಬದಲಾವಣೆಗಾಗಿ ವೋಟ್‌ ನೀಡಿದ್ದೇನೆ: ಪ್ರಕಾಶ್ ರಾಜ್

Sampriya
ಶುಕ್ರವಾರ, 26 ಏಪ್ರಿಲ್ 2024 (15:46 IST)
Photo Courtesy X
ಬೆಂಗಳೂರು:  ಕರ್ನಾಟಕದಲ್ಲಿ ಇಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ರಾಜ್ಯದ 14 ಕ್ಷೇತ್ರಗಳಿಗೆ ನಡೆಯುತ್ತಿದೆ. ಸ್ಯಾಂಡಲ್‌ವುಡ್ ಮಂದಿ ಬೆಳಗ್ಗಿನಿಂದಲೇ ತಮ್ಮ  ಹಕ್ಕನ್ನು ಚಲಾಯಿಸುತ್ತಿದ್ದಾರೆ. ನಟ ದರ್ಶನ್ ದಂಪತಿ, ರಾಜ್‌ಕುಮಾರ್ ಕುಟುಂಬ, ನಟಿ ರಾಗಿಣಿ ದ್ವಿವೇದಿ, ನಟ ಸುದೀಪ್, ನಟ ಗಣೇಶ್,ರಾಕಿಂಗ್ ಸ್ಟಾರ್ ಯಶ್ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಸೇರಿದಂತೆ ಅನೇಕರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಮತದಾನ ನಡೆದ ನಂತರ ವಿಡಿಯೋ ಸಂದೇಶ ಪೋಸ್ಟ್ ಮಾಡಿದ ನಟ ಪ್ರಕಾಶ್ ರಾಜ್ ಅವರು,   ನಾನು ಬದಲಾವಣೆಗೆ ಮತ ನೀಡಿದ್ದೇನೆ. ನಾನು ದ್ವೇಷದ ವಿರುದ್ಧ ಮತ ನೀಡಿದ್ದೇನೆ. ಬದಲಾವಣೆಗಾಗಿ ಮತ ನೀಡಿದ್ದೇನೆ. ಸಂಸತ್ತಿನಲ್ಲಿ ನನ್ನ ದನಿಯಾಗಬಲ್ಲರೆಂದು ನಾನು ನಂಬುವ ಪ್ರತಿನಿಧಿಗೆ ನಾನು ಮತ ಹಾಕಿದ್ದೇನೆ. ದಯವಿಟ್ಟು ಹೋಗಿ ಮತದಾನ ಮಾಡಿ ಮತ್ತು ಬದಲಾವಣೆ ತನ್ನಿ. ಎಲ್ಲರನ್ನೂ ಪ್ರೀತಿಸುತ್ತೇನೆ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಮತ ಚಲಾಯಿಸಿದ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿದ್ದ ಪ್ರಕಾಶ್ ರಾಜ್ ಅವರು, ನನ್ನ ಮತ ನನ್ನ ಹಕ್ಕಿಗೆ ಸಂಬಂಧಿಸಿದೆ, ಯಾರು ನನ್ನನ್ನು ಪ್ರತಿನಿಧಿಸಬೇಕೆಂದು, ಯಾರು ಸಂಸತ್ತಿನಲ್ಲಿ ನನ್ನ ದನಿಯಾಗಬೇಕೆಂದು ಆರಿಸುವ ನನ್ನ ಅಧಿಕಾರವಿದು. ಕಳೆದೊಂದು ದಶಕದಲ್ಲಿ ನಾವು ನೋಡಿರುವ ದ್ವೇಷ ಮತ್ತು ವಿಭಜನಾತ್ಮಕ ರಾಜಕಾರಣದಿಂದಾಗಿ ನೀವು ನಂಬಿಕೆಯಿರಿಸಿರುವ ಅಭ್ಯರ್ಥಿಗೆ ಮತ ನೀಡುವುದು ಅಗತ್ಯ. ನಾನು ನಂಬಿಕೆ ಇರಿಸಿದ ಅಭ್ಯರ್ಥಿಗೆ ಹಾಗು ಅವರು ತಂದ ಪ್ರಣಾಳಿಕೆಗೆ ಮತ್ತು ಬದಲಾವಣೆಗೆ ಮತ ನೀಡಿದ್ದೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಮುಖ ಹೇಗಿತ್ತೂ ಗೊತ್ತಾ, ವೈರಲ್ ಫೋಟೋ ಇಲ್ಲಿದೆ

ಜೈಲಲ್ಲೂ ದರ್ಶನ್‌ಗೆ ಡೆವಿಲ್ ಸಿನಿಮಾದ್ದೇ ಚಿಂತೆ

ವಿಶೇಷ ದಿನದಂದೇ ಮಗನಿಗೆ ನಾಮಕರಣ ಮಾಡಿದ ಸಿಂಹಪ್ರಿಯ ದಂಪತಿ

ಅಜಯ್ ರಾವ್ ವಿಚ್ಛೇದನಕ್ಕೆ ಕಾರಣ ಬಯಲು

ದರ್ಶನ್ ಅರೆಸ್ಟ್ ಆಗಿದ್ದಕ್ಕೆ ರಮ್ಯಾ ಅಚ್ಚರಿಯ ಹೇಳಿಕೆ

ಮುಂದಿನ ಸುದ್ದಿ
Show comments