Webdunia - Bharat's app for daily news and videos

Install App

ಬಾಲ್ಯದಲ್ಲಿ ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದೆ: ನಟಿ ಖುಷ್ಬೂ ಸುಂದರ್

Sampriya
ಬುಧವಾರ, 28 ಆಗಸ್ಟ್ 2024 (15:48 IST)
Photo Courtesy X
ಚೆನ್ನೈ: ಹೇಮಾ ಸಮಿತಿ ವರದಿ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದು, ಅನೇಕ ನಟಿ ಮಣಿಯರು ಚಿತ್ರರಂಗದಲ್ಲಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಮೌನ ಮುರಿದಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿ, ಚಿತ್ರರಂಗದಲ್ಲಿ ಮಹಿಳೆಯರು ಲೈಂಗಿಕ ವೇದನೆಗೆ ಗುರಿಯಾಗುತ್ತಿರುವುದು ನೋವಿನ ಸಂಗತಿಯಾಗಿದೆ.  ಎಲ್ಲ ಉದ್ಯಮದಲ್ಲೂ ಇದೇ ರೀತಿಯ ಸನ್ನಿವೇಶಗಳಿವೆ ಎಂದು ನಟಿ ಮತ್ತು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಅಭಿಪ್ರಾಯಪಟ್ಟಿದ್ದಾರೆ.

ಲೈಂಗಿಕ ಕಿರುಕುಳ ಎದುರಿಸುತ್ತಿರುವುದು ವಿಷಾದದ ಸಂಗತಿಯಾಗಿದೆ. ಧೈರ್ಯದಿಂದ ಮುಂದೆ ಬಂದು ತಮಗಾದ ಹಿಂಸೆಯನ್ನು ಹೇಳಿಕೊಂಡ ಮಹಿಳೆಯರನ್ನು ನಾವು ಶ್ಲಾಘಿಸಬೇಕು. ಕಿರುಕುಳವನ್ನು ಹೊರತರುವಲ್ಲಿ ಹೇಮಾ ಸಮಿತಿಯ ವರದಿ ತುಂಬಾ ಉಪಯುಕ್ತವಾಗಿದೆ. ಮಹಿಳೆಯರು ತಮ್ಮ ವೃತ್ತಿಜೀವನದಲ್ಲಿ ಮೇಲೆ ಬರಲು ಯತ್ನಿಸಿದರೆ ಕಿರುಕುಳವನ್ನು ಎದುರಿಸುತ್ತಾರೆ. ಹೀಗಾಗಿ ಸಂತ್ರಸ್ತೆಯರಿಗೆ ನಮ್ಮ ಬೆಂಬಲ ಬೇಕು. ಅವರ ನೋವನ್ನು ಕೇಳಬೇಕು. ಅವರಿಗೆ ಮಾನಸಿಕವಾಗಿ ಧೈರ್ಯ ನೀಡಿಬೇಕು ಎಂದು ಬರೆದುಕೊಂಡಿದ್ದಾರೆ.

ಹೆಂಡತಿ, ಮಕ್ಕಳನ್ನು ಹಿಂಸಿದ, ಮಗಳಿಗೆ ಲೈಂಗಿಕ ಕಿರುಕುಳ ನೀಡುವುದು ತನ್ನ ಜನ್ಮಸಿದ್ಧ ಹಕ್ಕು ಎಂದು ಪರಿಗಣಿಸಿದ ವ್ಯಕ್ತಿಯಿಂದ ನನ್ನ ತಾಯಿ ತನ್ನ ವೈವಾಹಿಕ ಸಂಬಂಧದಲ್ಲಿ ನೋವು ಅನುಭವಿಸಿದರು. ನಾನು ಎಂಟನೇ ವಯಸ್ಸಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದರೂ, ನನ್ನ ತಾಯಿಗೆ ಹೇಳಿದರೆ ನಂಬುತ್ತಾರೋ ಇಲ್ಲವೋ ಎಂದು ಹೆದರಿದ್ದೆ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ