Webdunia - Bharat's app for daily news and videos

Install App

ಅಕ್ರಮ ಪಿಸ್ತೂಲ್ ಮಾರಾಟ ದಂಧೆ; ಸ್ಯಾಂಡಲ್ ವುಡ್ ನಟ ಸೇರಿದಂತೆ ನಾಲ್ವರು ಅರೆಸ್ಟ್

Webdunia
ಸೋಮವಾರ, 5 ನವೆಂಬರ್ 2018 (06:47 IST)
ಬೆಂಗಳೂರು : ಅಕ್ರಮ ಪಿಸ್ತೂಲ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಸ್ಯಾಂಡಲ್ ವುಡ್ ನಟ ಸೇರಿದಂತೆ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ನಟ ಜಗದೀಶ್ ಎಸ್.ಹೊಸಮಠ (25), ಮೊಹಮ್ಮದ್ ನಿಜಾಮ್(25), ಬಿ.ಜಿ.ಸತೀಶ್‍ಕುಮಾರ್(44),  ಹಾಗೂ ಸಯ್ಯದ್ ಸಮೀರ್ ಅಹಮ್ಮದ್ ಬಂಧಿತ ಆರೋಪಿಗಳು. ಮೊಹಮ್ಮದ್ ನಿಜಾಮ್ ಮತ್ತು ಜಗದೀಶ್ ಹೊಸಮಠ ಪಿಸ್ತೂಲ್ ಇಟ್ಟುಕೊಂಡಿದ್ದಾರೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದಾಗ ಅವರ ಬಳಿ ಒಂದು ಪಿಸ್ತೂಲ್ ಮತ್ತು 10 ಬುಲೆಟ್ ಗಳು ದೊರೆತ ಹಿನ್ನಲೆಯಲ್ಲಿ ಅವರಿಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.


ನಂತರ ಬಂಧಿತ ಆರೋಪಿಗಳ ನೀಡಿದ ಮಾಹಿತಿಯ ಆಧಾರದ ಮೇಲೆ ಸತೀಶ್ ಮತ್ತು ಸೈಯದ್ ರನ್ನು ಅರೆಸ್ಟ್ ಮಾಡಿ ಮತ್ತೊಂದು ಪಿಸ್ತೂಲ್ ವಶಪಡಿಸಿಕೊಂಡಿದ್ದಾರೆ. ಪ್ರಕರಣದ ಹಿಂದೆ ಮತ್ತಷ್ಟು ಮಂದಿ ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು, ಸಿಸಿಬಿ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.


ಜಾಗ್ವರ್ ಜಗ್ಗ ಎಂದೇ ಕರೆಯುವ ಹುಬ್ಬಳ್ಳಿಯ ಗಣೇಶ್‍ಪೇಟೆಯ ಶೆಟ್ಟರ ಓಣಿಯಲ್ಲಿ ವಾಸವಾಗಿದ್ದ ನಟ ಜಗದೀಶ್ ಹೊಸಮಠ "ಸರ್ಕಾರ್" ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದರು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments