Webdunia - Bharat's app for daily news and videos

Install App

ದರ್ಶನ್, ಪವಿತ್ರಾ ಗೌಡಗೆ ಮಹತ್ವದ ದಿನ: ಹೆಲಿಕಾಪ್ಟರ್ ಬುಕ್ ಮಾಡಿರೋದು ವೇಸ್ಟ್ ಆಗುತ್ತಾ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (09:32 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡಗೆ ಇಂದು ಮಹತ್ವದ ದಿನವಾಗಿದ್ದು ಜಾಮೀನು ಅರ್ಜಿ ಭವಿಷ್ಯ ಬಹಿರಂಗವಾಗಲಿದೆ.

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮೂವರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಹೀಗಾಗಿ ತಮಗೂ ಜಾಮೀನು ಸಿಗಬಹುದು ಎಂಬ ವಿಶ್ವಾಸದಲ್ಲಿ ಎ2 ಆರೋಪಿ ದರ್ಶನ್ ಇದ್ದಾರೆ.

ದರ್ಶನ್ ಇಂದು ಬಿಡುಗಡೆಯಾಗಲಿದ್ದಾರೆ ಎಂದೇ ನಂಬಿಕೆಯಲ್ಲಿರುವ ಅವರ ಅಭಿಮಾನಿಗಳು ತಮ್ಮ ಬಾಸ್ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು, ದರ್ಶನ್ ರನ್ನು ಕರೆತರಲು ಹೆಲಿಕಾಪ್ಟರ್ ಕೂಡಾ ಸಿದ್ಧವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಅಷ್ಟು ಬೇಗ ಜಾಮೀನು ಸಿಗಬಹುದೇ ಎಂಬುದೇ ಪ್ರಶ್ನೆಯಾಗಿದೆ.

ಒಂದೇ ದಿನ ಇಂದು ದರ್ಶನ್ ಮತ್ತು ಪವಿತ್ರಾ ಜಾಮೀನು ಅರ್ಜಿ ತೀರ್ಮಾನವಾಗಲಿದೆ. ಆದರೆ ಈ ಕೇಸ್ ನಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದಾಗಿದೆ. ಹಾಗಾಗಿ ಅಷ್ಟು ಸುಲಭವಾಗಿ ಜಾಮೀನು ಸಿಗದು. ಆದರೆ ಮೊನ್ನೆಯಷ್ಟೇ ವಕೀಲರ ಭೇಟಿ ಬಳಿಕ ದರ್ಶನ್ ಗೆಲುವಾಗಿರುವುದು ನೋಡಿದರೆ ಜಾಮೀನು ಸಿಗಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು. ಹೀಗಾಗಿ ಇಂದು ದರ್ಶನ್, ಪವಿತ್ರಾ ಪಾಲಿಗೆ ಶುಭ ಶುಕ್ರವಾರವಾಗುತ್ತಾ ಎಂದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಲಿವುಡ್‌ನಲ್ಲಿ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಸ್ಮೈಲ್‌ ರಾಜ ಹಾಸ್ಯನಟ ಮದನ್‌ಬಾಲು ನಿಧನ

ಶೂಟಿಂಗ್‌ಗಾಗಿ ತಂಗಿದ್ದ ಹೊಟೇಲ್‌ನಲ್ಲಿ ಶವವಾಗಿ ಪತ್ತೆಯಾದ ಮಲಯಾಳಂ ನಟ ಕಲಾಭವನ್‌

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಮುಂದಿನ ಸುದ್ದಿ
Show comments