Webdunia - Bharat's app for daily news and videos

Install App

ದರ್ಶನ್, ಪವಿತ್ರಾ ಗೌಡಗೆ ಮಹತ್ವದ ದಿನ: ಹೆಲಿಕಾಪ್ಟರ್ ಬುಕ್ ಮಾಡಿರೋದು ವೇಸ್ಟ್ ಆಗುತ್ತಾ

Krishnaveni K
ಶುಕ್ರವಾರ, 27 ಸೆಪ್ಟಂಬರ್ 2024 (09:32 IST)
ಬಳ್ಳಾರಿ: ರೇಣುಕಾಸ್ವಾಮಿ ಮರ್ಡರ್ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮತ್ತು ಗೆಳತಿ ಪವಿತ್ರಾ ಗೌಡಗೆ ಇಂದು ಮಹತ್ವದ ದಿನವಾಗಿದ್ದು ಜಾಮೀನು ಅರ್ಜಿ ಭವಿಷ್ಯ ಬಹಿರಂಗವಾಗಲಿದೆ.

ಚಾರ್ಜ್ ಶೀಟ್ ಸಲ್ಲಿಕೆಯಾದ ಬಳಿಕ ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮೂವರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಹೀಗಾಗಿ ತಮಗೂ ಜಾಮೀನು ಸಿಗಬಹುದು ಎಂಬ ವಿಶ್ವಾಸದಲ್ಲಿ ಎ2 ಆರೋಪಿ ದರ್ಶನ್ ಇದ್ದಾರೆ.

ದರ್ಶನ್ ಇಂದು ಬಿಡುಗಡೆಯಾಗಲಿದ್ದಾರೆ ಎಂದೇ ನಂಬಿಕೆಯಲ್ಲಿರುವ ಅವರ ಅಭಿಮಾನಿಗಳು ತಮ್ಮ ಬಾಸ್ ಸ್ವಾಗತಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು, ದರ್ಶನ್ ರನ್ನು ಕರೆತರಲು ಹೆಲಿಕಾಪ್ಟರ್ ಕೂಡಾ ಸಿದ್ಧವಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಅಷ್ಟು ಬೇಗ ಜಾಮೀನು ಸಿಗಬಹುದೇ ಎಂಬುದೇ ಪ್ರಶ್ನೆಯಾಗಿದೆ.

ಒಂದೇ ದಿನ ಇಂದು ದರ್ಶನ್ ಮತ್ತು ಪವಿತ್ರಾ ಜಾಮೀನು ಅರ್ಜಿ ತೀರ್ಮಾನವಾಗಲಿದೆ. ಆದರೆ ಈ ಕೇಸ್ ನಲ್ಲಿ ಇವರಿಬ್ಬರು ಪ್ರಮುಖ ಆರೋಪಿಗಳಾಗಿದ್ದು, ಸಾಕ್ಷ್ಯಗಳ ಮೇಲೆ ಪ್ರಭಾವ ಬೀರಬಹುದಾಗಿದೆ. ಹಾಗಾಗಿ ಅಷ್ಟು ಸುಲಭವಾಗಿ ಜಾಮೀನು ಸಿಗದು. ಆದರೆ ಮೊನ್ನೆಯಷ್ಟೇ ವಕೀಲರ ಭೇಟಿ ಬಳಿಕ ದರ್ಶನ್ ಗೆಲುವಾಗಿರುವುದು ನೋಡಿದರೆ ಜಾಮೀನು ಸಿಗಬಹುದು ಎಂಬ ವಿಶ್ವಾಸ ಅಭಿಮಾನಿಗಳದ್ದು. ಹೀಗಾಗಿ ಇಂದು ದರ್ಶನ್, ಪವಿತ್ರಾ ಪಾಲಿಗೆ ಶುಭ ಶುಕ್ರವಾರವಾಗುತ್ತಾ ಎಂದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments