Webdunia - Bharat's app for daily news and videos

Install App

ಜೈಲಿನಲ್ಲಿರುವ ದರ್ಶನ್ ಬಿರಿಯಾನಿ ಬರುತ್ತದೆಂದು ಆಸೆ ಪಟ್ಟಿದ್ದೇ ಬಂತು

Krishnaveni K
ಮಂಗಳವಾರ, 20 ಆಗಸ್ಟ್ 2024 (14:11 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆಯಿಂದ ಬಿರಿಯಾನಿ ತರಿಸಿಕೊಂಡು ಊಟ ಮಾಡುವ ಬಗ್ಗೆ ಕನಸು ಕಂಡಿದ್ದೇ ಬಂತು. ಕೋರ್ಟ್ ಮತ್ತೆ ಅವರ ಆಸೆಗೆ ತಣ್ಣೀರೆರಚಿದೆ.

ನಟ ದರ್ಶನ್ ಜೈಲಿನ ಊಟ ಒಗ್ಗುತ್ತಿಲ್ಲ, ತೂಕ ಕಡಿಮೆಯಾಗುತ್ತಿದೆ ಎಂದು ಮನೆ ಊಟ ಹಾಗೂ ಕೈ ಶಸ್ತ್ರಚಿಕಿತ್ಸೆಯಾಗಿರುವುದರಿಂದ ಮನೆಯಿಂದ ಹಾಸಿಗೆ, ಓದಲು ಪುಸ್ತಕ ತರಿಸಿಕೊಳ್ಳಲು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪು ಇಂದು ಬರಬೇಕಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಮತ್ತೆ ಸೆಪ್ಟೆಂಬರ್ 5 ರವರೆಗೆ ಮುಂದೂಡಿದೆ. ಆಗಸ್ಟ್ 28 ರವರೆಗೆ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿತ್ತು. ಅದಾದ ಬಳಿಕವೂ ಅವರ ನ್ಯಾಯಾಂಗ ಬಂಧನ ಅವಧಿ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಈ ನಡುವೆ ಮನೆ ಊಟಕ್ಕಾಗಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಕೋರ್ಟ್ ಮುಂದೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಎರಡು ಬಾರಿ ಅಸ್ವಸ್ಥರಾಗಿದ್ದರು. ಒಮ್ಮೆ ಅಜೀರ್ಣ ಸಮಸ್ಯೆಗೊಳಗಾಗಿದ್ದರೆ, ಮತ್ತೊಮ್ಮೆ ಜ್ವರಕ್ಕೆ ತುತ್ತಾಗಿದ್ದರು. ಸದಾ ಐಷಾರಾಮಿ ಜೀವನಕ್ಕೆ ಒಗ್ಗಿಹೋಗಿದ್ದ ದರ್ಶನ್ ಗೆ ಜೈಲಿನ ಅನ್ನ, ಸಾಂಬಾರ್ ನುಂಗುವುದೇ ಕಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rape Case: ಮಡೆನೂರು ಮನು 31 ಚಾಟಿಂಗ್ ಡಿಟೇಲ್ಸ್ ಪಡೆದ ಖಾಕಿ, ಹಲವು ನಟ ನಟಿಯರಿಗೂ ಸಂಕಷ್ಟ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments