Webdunia - Bharat's app for daily news and videos

Install App

ಜೈಲಿನಲ್ಲಿರುವ ದರ್ಶನ್ ಬಿರಿಯಾನಿ ಬರುತ್ತದೆಂದು ಆಸೆ ಪಟ್ಟಿದ್ದೇ ಬಂತು

Krishnaveni K
ಮಂಗಳವಾರ, 20 ಆಗಸ್ಟ್ 2024 (14:11 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಜೈಲು ಸೇರಿರುವ ನಟ ದರ್ಶನ್ ಮನೆಯಿಂದ ಬಿರಿಯಾನಿ ತರಿಸಿಕೊಂಡು ಊಟ ಮಾಡುವ ಬಗ್ಗೆ ಕನಸು ಕಂಡಿದ್ದೇ ಬಂತು. ಕೋರ್ಟ್ ಮತ್ತೆ ಅವರ ಆಸೆಗೆ ತಣ್ಣೀರೆರಚಿದೆ.

ನಟ ದರ್ಶನ್ ಜೈಲಿನ ಊಟ ಒಗ್ಗುತ್ತಿಲ್ಲ, ತೂಕ ಕಡಿಮೆಯಾಗುತ್ತಿದೆ ಎಂದು ಮನೆ ಊಟ ಹಾಗೂ ಕೈ ಶಸ್ತ್ರಚಿಕಿತ್ಸೆಯಾಗಿರುವುದರಿಂದ ಮನೆಯಿಂದ ಹಾಸಿಗೆ, ಓದಲು ಪುಸ್ತಕ ತರಿಸಿಕೊಳ್ಳಲು ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಹೈಕೋರ್ಟ್ ಗೆ ಸಲ್ಲಿಸಿದ್ದ ರಿಟ್ ಅರ್ಜಿಯ ತೀರ್ಪು ಇಂದು ಬರಬೇಕಿತ್ತು.

ಆದರೆ ಇಂದು ವಿಚಾರಣೆ ನಡೆಸಿದ ಕೋರ್ಟ್ ತೀರ್ಪನ್ನು ಮತ್ತೆ ಸೆಪ್ಟೆಂಬರ್ 5 ರವರೆಗೆ ಮುಂದೂಡಿದೆ. ಆಗಸ್ಟ್ 28 ರವರೆಗೆ ದರ್ಶನ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಲಾಗಿತ್ತು. ಅದಾದ ಬಳಿಕವೂ ಅವರ ನ್ಯಾಯಾಂಗ ಬಂಧನ ಅವಧಿ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಈ ನಡುವೆ ಮನೆ ಊಟಕ್ಕಾಗಿ ಸಲ್ಲಿಸಿದ ಅರ್ಜಿಯ ತೀರ್ಪನ್ನು ಕೋರ್ಟ್ ಮುಂದೂಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಎರಡು ಬಾರಿ ಅಸ್ವಸ್ಥರಾಗಿದ್ದರು. ಒಮ್ಮೆ ಅಜೀರ್ಣ ಸಮಸ್ಯೆಗೊಳಗಾಗಿದ್ದರೆ, ಮತ್ತೊಮ್ಮೆ ಜ್ವರಕ್ಕೆ ತುತ್ತಾಗಿದ್ದರು. ಸದಾ ಐಷಾರಾಮಿ ಜೀವನಕ್ಕೆ ಒಗ್ಗಿಹೋಗಿದ್ದ ದರ್ಶನ್ ಗೆ ಜೈಲಿನ ಅನ್ನ, ಸಾಂಬಾರ್ ನುಂಗುವುದೇ ಕಷ್ಟವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸು ಫ್ರಮ್ ಸೋ ಶೋ ಕಡಿಮೆಯಾಯ್ತು ಎಂದ ಪ್ರೇಕ್ಷಕರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು

ಸ್ಟಾರ್ ಗಳಿಲ್ಲದಿದ್ದರೂ ಮೊದಲ ದಿನವೇ ಸು ಫ್ರಮ್ ಸೋ ಸಿನಿಮಾ ಭರ್ಜರಿ ಕಲೆಕ್ಷನ್

ಥೈಲ್ಯಾಂಡ್ ನಿಂದ ವಾಪಸ್ ಆದ ದರ್ಶನ್ ಗೆ ವಿವಿಐಪಿ ಭದ್ರತೆ: video

ಆ ಕ್ಷಣ ಶಾಶ್ವತವಾಗಿ ಅಚ್ಚೊತ್ತಿದೆ: ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ತಂದೆ ಬಗ್ಗೆ ಶ್ರುತಿ ಹಾಸನ್ ಹೆಮ್ಮೆ

ಪೂಜಾ, ಕಿಶನ್ ಮದುವೆ ಬೆನ್ನಲ್ಲೇ ಆದಿ, ಭಾಗ್ಯಗೇ ಮದುವೆ ಮಾಡುವಂತೆ ಡೈರೆಕ್ಟರ್‌ಗೆ ಫ್ಯಾನ್ಸ್ ಬೇಡಿಕೆ

ಮುಂದಿನ ಸುದ್ದಿ
Show comments