Webdunia - Bharat's app for daily news and videos

Install App

ಕೈದಿ ನಂಬರ್ ಬೆನ್ನಲ್ಲೇ ದರ್ಶನ್ ಟೀ ಶರ್ಟ್‌ ಟ್ರೆಂಡ್‌

Sampriya
ಭಾನುವಾರ, 1 ಸೆಪ್ಟಂಬರ್ 2024 (18:40 IST)
Photo Courtesy X
ಬೆಂಗಳೂರು:  ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ರೂ ಅವರ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ನಟನನ್ನು ಆರಾಧಿಸುವುದನ್ನು ಬಿಡುತ್ತಿಲ್ಲ.

ಬಳ್ಳಾರಿ ಜೈಲಿಗೆ ಎಂಟ್ರಿ ಕೊಡುವಾಗ ದರ್ಶನ್ ಅವರು ಬ್ರ್ಯಾಂಡೆಟ್ ಟೀ ಶರ್ಟ್ ಮತ್ತು ಕೂಲಿಂಗ್ ಗ್ಲಾಸ್‌ ಧರಿಸಿದ್ದರು. ಅದಲ್ಲದೆ ಪತ್ನಿ ವಿಜಯಲಕ್ಷ್ಮೀ ಭೇಟಿ ವೇಳೆಯೂ ಅದೇ ಟೀ ಶರ್ಟ್ ಧರಿಸಿದ್ದರು. ಇದೀಗ ಅದೇ ಮಾದರಿಯ ಟೀ ಶರ್ಟ್ ಧರಿಸಿ ಅಭಿಮಾನಿಗಳು ಫೋಟೋಶೂಟ್ ಮಾಡಿ, ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ ಆರಂಭದಲ್ಲಿ ದರ್ಶನ್ ಅವರಿಗೆ ನೀಡಿದ್ದ ಕೈದಿ ನಂಬರ್‌ ಅನ್ನು ತಮ್ಮ ವಾಹನಗಳಿಗೆ ಹಾಕಿ ಅಭಿಮಾನ ಪ್ರದರ್ಶಿಸಿದ್ದರು. ಇದೀಗ ಬಳ್ಳಾರಿ ಜೈಲಿನಲ್ಲಿ ನೀಡಿದ ಕೈದಿ ನಂಬರ್‌ ಅನ್ನು ವಾಹನಗಳಿಗೆ ಹಾಕಿದ್ದಾರೆ. ಅದಲ್ಲದೆ ಟೀ ಶರ್ಟ್ ಟ್ರೆಂಡ್ ಶುರು ಮಾಡಿದ್ದಾರೆ.

ಈಚೆಗೆ ದರ್ಶನ್ ಅವರ ಕರಿಯ ರಿ ರಿಲೀಸ್ ಆಗಿ ಭಾರೀ ದೊಡ್ಡ ಸದ್ದು ಮಾಡಿತ್ತು, ಅವರ ಅಭಿಮಾನಿಗಳು ಥಿಯೇಟರ್ ಮುಂದೆ ತಮ್ಮ ನೆಚ್ಚಿನ ಹೀರೋನ ಕಟೌಟ್ ನೋಡಿ ಕುಣಿದು ಕುಪ್ಪಳಿಸಿದರು.  ಇನ್ನೂ ಬೆಳ್ಳಿ ಪರದೆ ಮೇಲೆ ದರ್ಶನ್ ಅವರು ಎಂಟ್ರಿ ಕೊಡುತ್ತಿದ್ದ ಹಾಗೇ ಸಿಳ್ಳೆ ಹೊಡೆದು ಕರಿಯನನ್ನು ಸ್ವಾಗತಿಸಿದರು. ದರ್ಶನ್ ಅವರು ಜೈಲಿನಿಂದ ಹೊರ ಬಂದೇ ಬರುತ್ತಾರೆ ಎಂದು ಬೆಂಬಲ ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

46ವರ್ಷಗಳ ಬಳಿಕ ಸ್ಕ್ರಿನ್ ಹಂಚಿಕೊಳ್ಳಲಿದ್ದಾರೆ ದಕ್ಷಿಣ ಭಾರತದ ಸ್ಟಾರ್ ನಟರು

ದರ್ಶನ್ ಭೇಟಿಯಾದ ಬೆನ್ನಲ್ಲೇ ಡೆವಿಲ್‌ ಸಿನಿಮಾದ ಬಿಗ್‌ಅಪ್ಡೇಟ್‌ ಕೊಟ್ಟ ವಿಜಯಲಕ್ಷ್ಮಿ

ವ್ಯಕ್ತಿಯೊಬ್ಬರಿಗೆ ರಶ್ಮಿಕಾ ಶೇಕ್‌ಹ್ಯಾಂಡ್ ಕೊಟ್ರೆ ವಿಜಯ್ ದೇವರಕೊಂಡ ಹೀಗೇ ನಡೆದುಕೊಳ್ಳುವುದಾ, Viral Video

ವಿಷ್ಣು ಸ್ಮಾರಕಕ್ಕೆ ಕಿಚ್ಚ ಜಾಗ ಕೊಟ್ರೇ, ಅಭಿಮಾನಿಗಳ ಸಂಘಟನೆ ಹೈಕೋರ್ಟ್ ಗೆ ಹೋಗೋದಾ

ರಮ್ಯಾಗೆ ಅಶ್ಲೀಲ ಮೆಸೇಜ್‌, ಜೀವಬೆದರಿಕೆ ಪ್ರಕರಣ: ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments