Webdunia - Bharat's app for daily news and videos

Install App

ಕುತೂಹಲ ಮೂಡಿಸಿದೆ 'ಉದ್ಘರ್ಷ' ಫಸ್ಟ್ ಲುಕ್

Webdunia
ಬುಧವಾರ, 29 ಆಗಸ್ಟ್ 2018 (14:33 IST)
ಎರಡು ವರ್ಷಗಳ ಬಳಿಕ ಮತ್ತೆ ಕಮ್ ಬ್ಯಾಕ್ ಮಾಡಿದ ಸಸ್ಪೆನ್ಸ್-ಥ್ರಿಲ್ಲರ್ ಚಿತ್ರ ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ ಇದೀಗ ಉದ್ಘರ್ಷ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ದೇಸಾಯಿ ನಿರ್ದೇಶನದ 'ಉದ್ಘರ್ಷ' ಸಿನಿಮಾ ಪೋಸ್ಟರ್ ಇದೀಗ ಕುತೂಹಲ ಮೂಡಿಸಿದೆ..!!
ಈ ಚಿತ್ರದಲ್ಲಿ ಬಹುಭಾಷಾ ಸ್ಟಾರ್‌ಗಳು ನಟಿಸಿದ್ದಾರೆ. ಠಾಕೂರ್‌ ಅನೂಪ್‌ ಸಿಂಗ್‌, ಧನ್ಸಿಕಾ, ತಾನ್ಯ ಹೋಪ್‌, ಕಬೀರ್‌ ಸಿಂಗ್‌ ದುಹಾನ್‌, ಬಾಹುಬಲಿ ಖ್ಯಾತಿಯ ಪ್ರಭಾಕರ್‌, ಶ್ರದ್ಧಾ ದಾಸ್‌ ಹಾಗೂ ಅತಿಥಿ ಪಾತ್ರದಲ್ಲಿ ಹರ್ಷಿಕಾ ಪೂಣಚ್ಚ ಸೇರಿದಂತೆ ಇನ್ನೂ ಹಲವರೂ ನಟನಟಿಯರು ಉದ್ಘರ್ಷ ಚಿತ್ರದಲ್ಲಿದ್ದಾರೆ.
 
ಉದ್ಘರ್ಷ ಚಿತ್ರದ ಫಸ್ಟ್ ಲುಕ್ ನಲ್ಲಿ ರಕ್ತ ಸಿಕ್ತ ಹುಡುಗಿಯೊಬ್ಬಳ ಕಾಲುಗಳನ್ನು ತೋರಿಸಿ ಪೋಸ್ಟರ್ ನಲ್ಲೇ ಕುತೂಹಲ ಮೂಡಿಸಿದ್ದಾರೆ. ದೇವರಾಜ್ ಚಿತ್ರದ ನಿರ್ಮಾಣ ಮಾಡುತ್ತಿದ್ದು ಬಾಲಿವುಡ್ ಖ್ಯಾತ ಸಂಗೀತ ನಿರ್ದೇಶಕ ಸಂಜೋಯ್ ಚೌಧರಿ ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ.
 
'ಉದ್ಘರ್ಷ' ಚಿತ್ರವನ್ನು ಏಕಕಾಲದಲ್ಲಿ ಕನ್ನಡ, ತೆಲಗು, ತಮಿಳಿನಲ್ಲಿ ರಿಲೀಸ್ ಮಾಡಲಿದ್ದಾರೆ. ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದ್ದು, ಸಾಹಸ ನಿರ್ದೇಶಕ ರವಿವರ್ಮ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ. ಒಟ್ಟಾರೆ, ಬಾಕಿ ಇರುವ ಕೆಲಸಗಳನ್ನ ಮುಗಿಸಿ ಆದಷ್ಟೂ ಬೇಗ ತೆರೆಮೇಲೆ ಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments