ನಾಗತಿಹಳ್ಳಿ ಚಂದ್ರಶೇಖರ್ 2 ವರ್ಷಗಳ ಬಳಿಕ ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಿಸುತ್ತಿರುವ ಸಿನಿಮಾ ಇಷ್ಟಕಾಮ್ಯ. ಹೆಸರೇ ಹೇಳುವಂತೆ ವಿಭಿನ್ನವಾದ ಕಥಾಹಂದರವಿರುವ ಈ ಸಿನಿಮಾದ ಶೂಟಿಂಗ್ ಇದೀಗ ಭರದಿಂದ ಸಾಗುತ್ತಿದೆ ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಸಿನಿಮಾದ ಶೂಟಿಂಗ್ ನಡೆಯುತ್ತಿದೆ.
ಮೊನ್ನೆಯಷ್ಟೇ ಇಷ್ಟಕಾಮ್ಯ ಸಿನಾದ ಪೋಸ್ಟರ್ ನ್ನು ನಟ ನಿರ್ದೇಶಕ ಸುರೇಶ್ ಹೆಬ್ಳಿಕರ್ ಅವರು ಬಿಡುಗಡೆಗೊಳಿಸಿದ್ರು.
ಇದೀಗ ಸಿನಿಮಾದ ಚಿತ್ರೀಕರಣಕ್ಕಾಗಿ ಸಿನಿಮಾ ತಂಡ ಕಬ್ಬನ್ ಪಾರ್ಕ್ ನಲ್ಲಿ ಬೀಡು ಬಿಟ್ಟಿದೆ.ಇನ್ನು ಸಿನಿಮಾಗಾಗಿ ಕಬ್ಬನ್ ಪಾರ್ಕ್ ನಲ್ಲಿ ವಿಶೇಷವಾದ ಸೆಟ್ ಹಾಕಲಾಗಿದೆ. ಸಾಮಾನ್ಯವಾಗಿ ಕಬ್ಬನ್ ಪಾರ್ಕ್ ನಲ್ಲಿ ಸಿನಿಮಾದ ಶೂಟಿಂಗ್ ಗಳಾಗೋದು ಕಡಿಮೆ.ಆದ್ರೆ ಇಷ್ಟಕಾಮ್ಯ ಸಿನಿಮಾ ತಂಡ ಮಾತ್ರ ಕಬ್ಬನ್ ಪಾರ್ಕ್ ನ್ನೇ ಆಯ್ದುಕೊಂಡಿದೆ.
ಈ ಸಿನಿಮಾದಲ್ಲಿ ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವಿಜಯ್ ಸೂರ್ಯ, ಅಶ್ವಿನಿ ನಕ್ಷತ್ರ ಸಿರಿಯಲ್ ಖ್ಯಾತಿಯ ಮಯೂರಿ ಮತ್ತು ಕಾವ್ಯ ಶೆಟ್ಟಿ ನಟಿಸುತ್ತಿದ್ದಾರೆ. ಇವರನ್ನು ಒಳಗೊಂಡ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾಯಿತು. ಸಿನಿಮಾವನ್ನು ಶಂಕರೇ ಗೌಡ ನಿರ್ಮಿಸುತ್ತಿದ್ದು, ರವಿಕುಮಾರ್ ಸಾನಾ ಸಿನೆಮ್ಯಾಟೋಗ್ರಾಫರ್. ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಪ್ರಕಾಶ್ ಬೆಳವಾಡಿ, ರಂಗಾಯಣ ರಘು, ಬಿ ಜಯಶ್ರೀ, ಮಂಡ್ಯ ರಮೇಶ್, ಸುಮನ್ ನಗರ್ಕರ್, ಚಿಕ್ಕಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.