Webdunia - Bharat's app for daily news and videos

Install App

ಐಟಿ ದಾಳಿ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ ಎಂದ ಯಶ್: ನಾನ್ಯಾಕೆ ಭಯ ಪಡ್ಲಿ ಎಂದ ಸುದೀಪ್

Webdunia
ಗುರುವಾರ, 3 ಜನವರಿ 2019 (16:54 IST)
ಬೆಂಗಳೂರು: ಬೆಳಿಗ್ಗೆಯಿಂದ ತಮ್ಮ ನಿವಾಸಗಳ ಮೇಲೆ ನಡೆಯುತ್ತಿರುವ ಐಟಿ ದಾಳಿ ಬಗ್ಗೆ ನಟರಾದ ಸುದೀಪ್ ಮತ್ತು ರಾಕಿಂಗ್ ಸ್ಟಾರ್ ಯಶ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.


ಮುಂಬೈನಿಂದ ಈಗಷ್ಟೇ ಬೆಂಗಳೂರಿಗೆ ಬಂದಿಳಿದ ಯಶ್ ಐಟಿ ದಾಳಿ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ಇದರ ಬಗ್ಗೆ ತಲೆನೇ ಕೆಡಿಸಿಕೊಂಡಿಲ್ಲ. ಫಸ್ಟ್ ಟೈಮ್ ಇದು ನಂಗೂ. ಏನಾಗಿದೆ ಮನೆಯಲ್ಲಿ ಅಂತ ನನಗೂ ಗೊತ್ತಿಲ್ಲ. ಆದರೆ ಇದೆಲ್ಲಾ ಪ್ರೊಸೀಜರ್ ಅಷ್ಟೇ. ಅದಕ್ಕೆ ತಲೆಕೆಡಿಸಿಕೊಳ್ಳುಂವತದ್ದು ಏನೂ ಇಲ್ಲ. ಕೆಜಿಎಫ್ ಯಶಸ್ಸಿನಿಂದ ಹೀಗಾಯ್ತು ಎನ್ನುವುದೆಲ್ಲಾ ಸುಳ್ಳು. ನಾವು ದೇಶದ ಪ್ರಜೆಗಳಾಗಿ ಕಾನೂನಿಗೆ ಒಳಪಟ್ಟವರೇ ಅಲ್ವಾ? ಎಲ್ಲವನ್ನೂ ಪರಿಶೀಲನೆ ಮಾಡ್ತಿದ್ದಾರೆ ಅಷ್ಟೇ’ ಎಂದು ಯಶ್ ಹೇಳಿದ್ದಾರೆ.

ಇನ್ನೊಂದೆಡೆ ತಮ್ಮ ನಿವಾಸದ ಎದುರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸುದೀಪ್ ‘ನಾನು ಯಾಕೆ ಭಯಪಡ್ಲಿ? ಬಹುಶಃ ಈಗ ಮೂರು ಬಿಗ್ ಬಜೆಟ್ ಸಿನಿಮಾದಲ್ಲಿ ಅಭಿನಯಿಸಿದ್ದೇನೆ. ಅದಕ್ಕೇ ಪರಿಶೀಲನೆ ಮಾಡ್ತಿದ್ದಾರೆ ಅಷ್ಟೇ. ಮನೆಯಲ್ಲಿ ತಾಯಿ ಒಬ್ಬರೇ ಇದ್ದಾರೆ ಎಂಬ ಕಾರಣಕ್ಕೆ ಮನೆಗೆ ಬಂದೆ. ಇಲ್ಲದೇ ಇದ್ದರೆ ಫೋನ್ ನಲ್ಲೇ ಎಲ್ಲಾ ವ್ಯವಹಾರ ನೋಡಿಕೊಳ್ಳುತ್ತಿದ್ದೆ. ನಾನು ಯಾವುದೇ ತಪ್ಪು ಮಾಡಿಲ್ಲ. ಹಾಗಿರುವಾಗ ಯಾಕೆ ಭಯ ಪಡ್ಲಿ?’ ಎಂದಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments