ಬಿಗ್‌ಬಾಸ್‌ ನಡುಗಿಸ್ತೀನಿ ಎಂದಿರುವ ಜಗದೀಶ್ ನಕಲಿ ಲಾಯರ್ ಅಂತೆ

Sampriya
ಗುರುವಾರ, 3 ಅಕ್ಟೋಬರ್ 2024 (18:41 IST)
ಕಲರ್ಸ್ ಕನ್ನಡ ವಾಹಿನಿ ಇಂದು ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಬಿಗ್‌ಬಾಸ್‌ಗೆ ಅವಾಜ್ ಹಾಕಿದ ವಕೀಲ ಜಗದೀಶ್ ಅವರು ನಕಲಿ ಲಾಯರ್ ಅಂತೆ. ಈ ಸಂಬಂಧ ಬಿಗ್‌ಬಾಸ್ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.  

ಫೇಕ್ ಮಾರ್ಕ್ಸ್ ಕಾರ್ಡ್‌ ಕೊಟ್ಟು ಪದವಿ ಹಾಗೂ ಎಲ್‌ಎಲ್‌ಬಿ ಪದವಿ ಮಾಡಿ ಬಾರ್ ಕೌನ್ಸಿಲ್ ಅನುಮತಿ ಪಡೆದಿದ್ದರು ಎಂಬ ವಿಚಾರ ಬಹಿರಂಗವಾಗಿದೆ. ಈ ವಿಚಾರವನ್ನು ಇದೀಗ ಜಗದೀಶ್ ಪಡೆದಿದ್ದ ಲಾಯರ್ ಲೈಸೆನ್ಸ್‌ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದು ಮಾಡಿದೆ.  

ಬಿಗ್ ಬಾಸ್ ಕನ್ನಡ ಸೀಸನ್ 11ರ ಸ್ಪರ್ಧಿಯಾಗಿ ದೊಡ್ಮನೆ ಸೇರಿರುವ ಜಗದೀಶ್ ಅವರು ಮೂರನೇ ದಿನದಲ್ಲೇ ಮನೆಯಿಂದ ಹೊರ ನಡೆಯುವುದಾಗಿ ಹೇಳಿದ್ದಾರೆ.  ಅಲ್ಲದೆ, ಬಿಗ್ ಬಾಸ್ ವಿರುದ್ಧ ತಮ್ಮದೇ ಮಾತಿನ ದಾಟಿ ಗುಡುಗಿರುವ ಅವರು, ನನ್ನನ್ನು ಹೊರಗೆ ಕಳಿಸಿದರೆ.. ಬಿಗ್ ಬಾಸ್ ಮನೆಯಲ್ಲಿ ನಡೆಸುವ ಎಲ್ಲಾ ರಹಸ್ಯಗಳನ್ನು ಬಹಿರಂಗಗೊಳಿಸುತ್ತೇನೆ. ಮುಂದೆ ಹೇಗೆ ಶೋ ನಡೆಸುತ್ತೀರಿ ಅಂತಾ ನೋಡುತ್ತೀನಿ ಎಂದು ಅವಾಜ್ ಹಾಕಿದ್ದಾರೆ.

ಇದೀಗ ಜಗದೀಶ್ ಪಿಯುಸಿಯನ್ನೇ ಓದದೇ ನಕಲಿ ಮಾರ್ಕ್ಸ್‌ ಮಾಡಿಸಿ, ಡಿಗ್ರಿ ಮಾಡಿದ್ದಾರೆ. ಅಲ್ಲದೆ, ಪದವಿ ಮೇಲೆ ಎಲ್‌ಎಲ್‌ಬಿ ಮಾಡಿ, ಬೆಂಗಳೂರಿನ ಬದಲು ದೆಹಲಿಗೆ ಹೋಗಿ ದೆಹಲಿ ಬಾರ್ ಕೌನ್ಸಿಲ್‌ನಲ್ಲಿ ವಕೀಲಿಕೆ ಸನ್ನದು ಪಡೆದಿದ್ದಾರೆ.. ಹೀಗಾಗಿ ಅವರ ಬಾರ್ ಕೌನ್ಸಿಲ್ ಲೈಸೆನ್ಸ್ ರದ್ದತಿ ಕೋರಿ ಹಿಮಾಂಶು ಭಾಟಿ ಎನ್ನುವವರು ಕೌನ್ಸಿಲ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ಪರಿಗಣಿಸಿದ ದೆಹಲಿ ಬಾರ್ ಕೌನ್ಸಿಲ್ ವಕೀಲ ಜಗದೀಶ್ ಅವರಿಗೆ ನೀಡದಲಾಗಿದ್ದ ಅನುಮತಿಯನ್ನು ತಾತ್ಕಾಲಿಕವಾಗಿ ತಡೆ ಹಿಡಿದಿತ್ತು.

ದಾಖಲಾತಿ ಪರಶೀಲನೆ ವೇಳೆ ಪಿಯುಸಿ ಅಂಕಪಟ್ಟಿ ನಕಲಿ ಎಂದು ತಿಳಿದು ಬಂದಿತ್ತು. ಹೀಗಾಗಿ ಕೆ.ಎನ್ ಜಗದೀಶ್ ಕುಮಾರ್ ಅವರ ವಕೀಲಿಕೆ ಸನ್ನದು ಅನ್ನು ರದ್ದುಗೊಳಿಸಲಾಗಿದೆ ಎಂದು ಅಧಿಸೂಚನೆ ಹೊರಡಿಸಿದೆ.


<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಲ್ಮಾನ್ ಖಾನ್ ಜೊತೆ ನಟಿಸಿದ್ದ ಖ್ಯಾತ ಬಾಡಿ ಬಿಲ್ಡರ್ ವರೀಂದರ್ ಘುಮಾನ್ ಇನ್ನಿಲ್ಲ

ಒಂದೇ ವಾರಕ್ಕೆ ₹ 510 ಕೋಟಿ ಚಾಚಿಕೊಂಡ ಕಾಂತಾರ ಪ್ರೀಕ್ವೆಲ್‌: ಹಲವು ದಾಖಲೆಗಳು ಉಡೀಸ್‌

ಸರ್ಕಾರ ಬಿಟ್ಟರೂ ನಾವು ಬಿಡಲ್ಲ: ಬಿಗ್ ಬಾಸ್ ಮನೆ ಗೇಟ್ ಏರಿ ಕನ್ನಡ ಪರ ಹೋರಾಟಗಾರರ ಹೋರಾಟ

ರಿಷಬ್ ಶೆಟ್ಟಿ ಹೈದರಾಬಾದ್ ನಲ್ಲಿ ಕನ್ನಡ ಮಾತನಾಡಿದ್ದು ಇದೇ ಕಾರಣಕ್ಕೆ

ತೆರೆದ ದೊಡ್ಮನೆ, ನನ್ನ ಕರೆಗೆ ತಕ್ಷಣವೇ ಸ್ಪಂದಿಸಿದ ಡಿಕೆ ಶಿವಕುಮಾರ್ ಧನ್ಯವಾದ: ಕಿಚ್ಚ ಸುದೀಪ್ ಪೋಸ್ಟ್

ಮುಂದಿನ ಸುದ್ದಿ
Show comments