ನಟಿ ಮಾಲಾಶ್ರೀಗೆ ಕ್ಷಮೆ ಕೋರಿ ಸಾಂತ್ವನಿಸಿದ ನಟ ಜಗ್ಗೇಶ್

Webdunia
ಶನಿವಾರ, 1 ಮೇ 2021 (07:35 IST)
ಬೆಂಗಳೂರು: ಕೊರೋನಾದಿಂದಾಗಿ ಪತಿ ರಾಮು ಅವರನ್ನು ಕಳೆದುಕೊಂಡಿರುವ ನಟಿ ಮಾಲಾಶ್ರೀಗೆ ನವರಸನಾಯಕ ಜಗ್ಗೇಶ್ ಸಾಂತ್ವನ ನೀಡಿದ್ದಾರೆ.


ಮಾಲಾಶ್ರೀಗೆ ಟ್ವೀಟ್ ಮೂಲಕ ಸಾಂತ್ವನದ ನುಡಿಗಳನ್ನು ಜಗ್ಗೇಶ್ ಹೇಳಿದ್ದಾರೆ. ‘ನಿಮ್ಮ ಕಷ್ಟದಲ್ಲಿ ಭಾಗಿ ಆಗುವ ಯೋಗ್ಯತೆ ಇಲ್ಲದಂತೆ ಮಾಡಿದ ಈ ಸಮಯಕ್ಕೆ ತಲೆ ಬಾಗಿ ಕ್ಷಮೆ ಕೋರುವೆ. ತಮ್ಮ ನೋವಿಗೆ ಸಾಂತ್ವನ ಹೇಳುವ ಶಕ್ತಿ ಮಾತ್ರ ಉಳಿದಿದೆ. ಕನ್ನಡ ಚಿತ್ರರಂಗಕ್ಕೆ ಅನನ್ಯ ಸೇವೆ ಮಾಡಿ ಅನೇಕ ಚಿತ್ರ ಕಾರ್ಮಿಕರಿಗೆ ಅನ್ನ ನೀಡಿದ ಮಹನೀಯ ನನ್ನ ತಮ್ಮ ರಾಮು. ಅವನ ಆತ್ಮಕ್ಕೆ ಶಾಂತಿ ಕೋರುವೆ ಮನೆಯಲ್ಲಿಯೇ.

ರಾಮು ಮತ್ತೆ ಹುಟ್ಟಿಬರಲಿ ಎನ್ನುವುದು ನನ್ನ ಪ್ರಾರ್ಥನೆ. ದಯಮಾಡಿ ಈ ಸಂಕಷ್ಟವನ್ನು ಎದುರಿಸಿ ಮಕ್ಕಳನ್ನು ರಾಮು ಎತ್ತರಕ್ಕೆ ಬೆಳೆಸಿ. ನಿಮ್ಮ ಜೊತೆ ನಾವು ಉದ್ಯಮದ ಸ್ನೇಹಿತರು ಎಲ್ಲರೂ ಇರುತ್ತೇವೆ. ಮುಂದಿನ ಸಾಂಸಾರಿಕ ಜೀವನ ನಿಭಾಯಿಸುವ ಶಕ್ತಿ ಆ ರಾಯರು ನಿಮಗೆ ನೀಡಲಿ’ ಎಂದು ಜಗ್ಗೇಶ್ ಸಾಂತ್ವನ ಸಂದೇಶ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಸಿಎಂ ರೇವಂತ್ ರೆಡ್ಡಿಯನ್ನು ಭೇಟಿಯಾದ ರಶ್ಮಿಕಾ ಮಂದಣ್ಣ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಪರ ಪ್ರತಿಭಟನೆಗೆ ಮುಂದಾದ ಕೆಲ ಸಂಘಟನೆಗಳು

ಕೊನೆಗೂ ಯಶ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಟೀಸರ್ ನೋಡಿ ಶಾಕ್ ಆಗಿದ್ದ ಅಭಿಮಾನಿಗಳಿಗೆ ಟ್ರೇಲರ್‌ ಹೇಗಿರುತ್ತೆ

ಡಾಗ್ ಸತೀಶ್ ವಿರುದ್ಧ ಠಾಣೆ ಮೆಟ್ಟಿಲೇರಿದ ರಜತ್‌, ಅಷ್ಟಕ್ಕೂ ಸತೀಶ್ ಅಂದಿದ್ದೇನೂ

ಮದುವೆ ಬಳಿಕ ಈ ವಿಚಾರದಲ್ಲಿ ವಿರಾಟ್ ಕೊಹ್ಲಿಯನ್ನೂ ಮೀರಿಸಿದ ರಶ್ಮಿಕಾ ವಿಜಯ್ ದೇವರಕೊಂಡ

ಮುಂದಿನ ಸುದ್ದಿ
Show comments