Webdunia - Bharat's app for daily news and videos

Install App

ಲೈಂಗಿಕ ಕಿರುಕುಳಕ್ಕೊಳಗಾಗುವ ನಟಿಯರಿಗೆ ಜಗ್ಗೇಶ್ ನೆರವಾಗಿದ್ದು ಹೇಗೆ?

Webdunia
ಭಾನುವಾರ, 21 ಜನವರಿ 2018 (09:02 IST)
ಬೆಂಗಳೂರು: ಅವಕಾಶಕ್ಕಾಗಿ ನಿರ್ಮಾಪಕರೊಬ್ಬರು ಮಂಚಕ್ಕೆ ಕರೆದರೆಂದು ನಟಿ ಶ್ರುತಿ ಹರಿಹರನ್ ಆರೋಪ ಮಾಡಿದ್ದು ಭಾರೀ ಸುದ್ದಿಯಾಗಿತ್ತು. ಇದರ ಬಗ್ಗೆ ಜಗ್ಗೇಶ್ ಪ್ರತಿಕ್ರಿಯಿಸಿದ್ದು, ತಮ್ಮದೇ ರೀತಿಯಲ್ಲಿ ಸಮಸ್ಯೆ ಬಗೆ ಹರಿಸಲು ಮುಂದಾಗಿದ್ದಾರೆ.
 

ನಟಿಯರ ಸಮಸ್ಯೆ ಬಗ್ಗೆ ಜಗ್ಗೇಶ್ ಈಗಾಗಲೇ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಜತೆ ಚರ್ಚಿಸಿದ್ದಾರಂತೆ. ಅಲ್ಲದೆ, ಮುನಿರತ್ನ ಕೂಡಾ ಸದ್ಯದಲ್ಲೇ ಸಭೆ ಕರೆಯುವುದಾಗಿ ಭರವಸೆ ನೀಡಿದ್ದಾರಂತೆ. ಈ ಮೂಲಕ ಸಭೆಯಲ್ಲಿ ಸಮಸ್ಯೆ ಕುರಿತು ಚರ್ಚಿಸುವುದಾಗಿ ಹೇಳಿದ್ದಾರೆ. ಅಲ್ಲದೆ, ನಟಿ ಶ್ರುತಿ ಹಾಸನ್ ಗೂ ಮುನಿರತ್ನ ಸಭೆಯಲ್ಲಿ ಪಾಲ್ಗೊಂಡು ಸಮಸ್ಯೆ ಹೇಳಿಕೊಳ್ಳಿ ಎಂದು ಜಗ್ಗೇಶ್ ಸಲಹೆ ನೀಡಿದ್ದಾರೆ.

ಯಾರಿಗೆ ಏನೇ ಸಮಸ್ಯೆಯಾದರೂ ಮುಲಾಜಿಲ್ಲದೇ ದೂರು ನೀಡಿ. ಹೆಣ್ಣು ಮಕ್ಕಳಿಗೆ ತೊಂದರೆ ನೀಡುವವರಿದ್ದರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಎಂದು ಜಗ್ಗೇಶ್ ಖಡಕ್ ಆಗಿ ಹೇಳಿದ್ದಾರೆ.  ಹೀಗಾದರೂ ತೆರೆಮರೆಯಲ್ಲಿರುವ ಇನ್ನಷ್ಟು ನೋವಿನ ಘಟನೆಗಳು ಹೊರಬರುತ್ತವಾ? ಕಾದು ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

ಮುಂದಿನ ಸುದ್ದಿ