Select Your Language

Notifications

webdunia
webdunia
webdunia
webdunia

ಹುಲಿ ಲಾಕೆಟ್ ಅಧಿಕಾರಿಗಳಿಗೆ ಒಪ್ಪಿಸಿದ ಜಗ್ಗೇಶ್: ಇನ್ನು ನೆಮ್ಮದಿಯಾಗಿ ಪಾಚ್ಕೊಳ್ಳಿ ಎಂದು ಟಾಂಗ್

ಹುಲಿ ಲಾಕೆಟ್ ಅಧಿಕಾರಿಗಳಿಗೆ ಒಪ್ಪಿಸಿದ ಜಗ್ಗೇಶ್: ಇನ್ನು ನೆಮ್ಮದಿಯಾಗಿ ಪಾಚ್ಕೊಳ್ಳಿ ಎಂದು ಟಾಂಗ್
ಬೆಂಗಳೂರು , ಗುರುವಾರ, 26 ಅಕ್ಟೋಬರ್ 2023 (09:10 IST)
ಬೆಂಗಳೂರು: ಹುಲಿ ಉಗುರಿನ ಲಾಕೆಟ್ ಇರುವ ಕಾರಣಕ್ಕೆ ನಟ ಜಗ್ಗೇಶ್ ವಿರುದ್ಧ ದೂರು ದಾಖಲಾಗಿತ್ತು. ಈ ಸಂಬಂಧ ನಿನ್ನೆ ಅರಣ್ಯಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಹುಲಿ ಉಗುರಿನ ಲಾಕೆಟ್ ಧರಿಸಿದ ಕಾರಣಕ್ಕೆ ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಬಂಧಿಯಾದ ಬೆನ್ನಲ್ಲೇ ಹಲವು ಸೆಲೆಬ್ರಿಟಿಗಳ ಹೆಸರು ಇದೇ ಪ್ರಕರಣದಲ್ಲಿ ಕೇಳಿಬಂದಿತ್ತು. ನಟ ದರ್ಶನ್, ಜಗ್ಗೇಶ್, ರಾಕ್ ಲೈನ್ ವೆಂಕಟೇಶ್ ವಿರುದ್ಧವೂ ದೂರು ದಾಖಲಾಗಿತ್ತು. ಜಗ್ಗೇಶ್ ತಮ್ಮ ತಾಯಿಯಿಂದ 20 ನೆಯ ವಯಸ್ಸಿನಲ್ಲಿ ಹುಲಿ ಉಗುರಿನ ಲಾಕೆಟ್ ಗಿಫ್ಟ್ ಆಗಿ ಸಿಕ್ಕಿದ್ದಾಗಿ ಸಂದರ್ಶನವೊಂದರಲ್ಲಿ ಹೇಳಿದ್ದ ವಿಡಿಯೋ ವೈರಲ್ ಆಗಿತ್ತು.

ಅದರಂತೆ ಅವರ ನಿವಾಸಕ್ಕೆ ನಿನ್ನೆ ಅರಣ‍್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಅಧಿಕಾರಿಗಳಿಗೆ ಲಾಕೆಟ್ ಒಪ್ಪಿಸಿರುವುದಾಗಿ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಕಾನೂನು ದೊಡ್ಡದು. ಅಧಿಕಾರಿಗಳು ಕೇಳಿದ ವಸ್ತು ಒಪ್ಪಿಸಲಾಗಿದೆ. ಅಮ್ಮ ನೀಡಿದ ಬಹಳ ಹಳೆಯ ಲಾಕೆಟ್ ಎಂದು ತಿಳಿಸಿರುವೆ. ಎಷ್ಟೋ ದೋಚುವ ಮನುಷ್ಯರು, ಕೊಲೆ ಘಾತುಕರು, ದೇಶ ದ್ರೋಹಿಗಳು, ಸಮಾಜಘಾತುಕರಿಗಿಂತ ನನ್ನ ತಾಯಿ ಕಾಣಿಕೆ ಬಗ್ಗೆ ತಲೆಕಡಿಸಿಕೊಂಡ ದೇವರುಗಳಿಗೆ ಧನ್ಯವಾದ. ತಲೆ ತಗ್ಗಿಸುವ ಕೆಲಸ ಮಾಡಿಲ್ಲ. ಮಾಡೋದೂ ಇಲ್ಲ, ಪಾಚ್ಕೊಳ್ಳಿ’ ಎಂದು ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಮ್ಯಾ-ರಾಜ್ ಬಿ ಶೆಟ್ಟಿ ಮುನಿಸು ಮರೆತಿಲ್ಲ ಎನ್ನುವುದಕ್ಕೆ ಇದೇ ಸಾಕ್ಷಿ!