Select Your Language

Notifications

webdunia
webdunia
webdunia
webdunia

ಹಂಸಲೇಖ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಟಾಂಗ್

ಹಂಸಲೇಖ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಟಾಂಗ್
ಬೆಂಗಳೂರು , ಸೋಮವಾರ, 15 ನವೆಂಬರ್ 2021 (18:11 IST)
ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾದ ಸಂಗೀತ ನಿರ್ದೇಶಕ ಹಂಸಲೇಖ ಬಗ್ಗೆ ನವರಸನಾಯಕ ಜಗ್ಗೇಶ್ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

‘ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ ಆದರು ಆ ಮಾತು ಹೊಟ್ಟೆ ತುಂಬಿಸದು. ಮಾತು ಕೆಟ್ಟರೆ ಆ ಮೃಷ್ಟಾನ್ನವೇ ವಿಷವಾಗಿ ಅಜೀರ್ಣ ಆಗುವುದು. ಸಾಮಾಜಿಕ ಕ್ಷೇತ್ರ ಹಗ್ಗದ ಮೇಲಿನ ನಡಿಗೆ. ಪಡೆವುದು ಸುಲಭ. ಕಳೆದುಕೊಳ್ಳಲು ಕ್ಷಣ ಸಾಕು’ ಎಂದು ಜಗ್ಗೇಶ್ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಆದರೆ ಜಗ್ಗೇಶ್ ಈ ಹೇಳಿಕೆ ಹಂಸಲೇಖ ಕುರಿತಾಗಿ ಎಂದು ನೆಟ್ಟಿಗರು ಅರ್ಥ ಮಾಡಿಕೊಂಡಿದ್ದಾರೆ. ಹಿಂದೆ ಪೇಜಾವರ ಶ್ರೀಗಳ ಜೊತೆ ಜಗ್ಗೇಶ್ ಇರುವ ಫೋಟೋ ಮೂಲಕ ಪ್ರತಿಕ್ರಿಯಿಸಿರುವ ನೆಟ್ಟಿಗರು ನಿಮ್ಮ ಮಾತು ಸರಿಯಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಷಮೆ ಕೇಳಿದರೂ ಹಂಸಲೇಖಾ ವಿರುದ್ಧ ನೆಟ್ಟಿಗರ ಅಸಮಾಧಾನ