Select Your Language

Notifications

webdunia
webdunia
webdunia
webdunia

ಪುತ್ರ, ಸಹೋದರನಿಗಾಗಿ ನಿರ್ದೇಶನ ಮಾಡಲಿದ್ದಾರೆ ನವರಸನಾಯಕ ಜಗ್ಗೇಶ್

ಪುತ್ರ, ಸಹೋದರನಿಗಾಗಿ ನಿರ್ದೇಶನ ಮಾಡಲಿದ್ದಾರೆ ನವರಸನಾಯಕ ಜಗ್ಗೇಶ್
ಬೆಂಗಳೂರು , ಶುಕ್ರವಾರ, 6 ಡಿಸೆಂಬರ್ 2019 (09:51 IST)
ಬೆಂಗಳೂರು: ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಸಕ್ಸಸ್ ಆಗಿರುವ ಖುಷಿಯಲ್ಲಿರುವ ನವರಸನಾಯಕ ಜಗ್ಗೇಶ್ ಈಗ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿ ಬಂದಿದೆ. ಆದರೆ ಈ ಬಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ.


ಹಿಂದೆ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದ ಜಗ್ಗೇಶ್ ಗೆ ಇದು ನಿರ್ದೇಶಕರಾಗಿ ಮೂರನೇ ಸಿನಿಮಾ. ವಿಶೇಷವೆಂದರೆ ಈ ಸಿನಿಮಾದಲ್ಲಿ ಅವರು ಪುತ್ರ ಗುರುರಾಜ್ ಮತ್ತು ಸಹೋದರ ಕೋಮಲ್ ಗಾಗಿ ನಿರ್ದೇಶನ ಮಾಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ಸದ್ಯಕ್ಕೆ ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಜಗ್ಗೇಶ್ ಇದಾದ ಬಳಿಕ ತಮ್ಮ ನಿರ್ದೇಶನದ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟಿವಿ ರೂಮರ್ ಗಳಿಗೆ ತೆರೆ ಎಳೆದ ಡಿ ಬಾಸ್ ದರ್ಶನ್