Webdunia - Bharat's app for daily news and videos

Install App

ನಿರ್ಭಯಾ ಹಂತಕರ ಹ್ಯಾಂಗ್ ಮ್ಯಾನ್ ಗೆ ನಟ ಜಗ್ಗೇಶ್ ಆರ್ಥಿಕ ನೆರವು

Webdunia
ಶುಕ್ರವಾರ, 10 ಜನವರಿ 2020 (09:43 IST)
ಬೆಂಗಳೂರು: ದೆಹಲಿ ಗ್ಯಾಂಗ್ ರೇಪ್ ಪ್ರಕರಣದಲ್ಲಿ ಗಲ್ಲು ಶಿಕ್ಷೆಗೊಳಗಾದ ಆರೋಪಿಗಳಿಗೆ ಶಿಕ್ಷೆ ಜಾರಿಗೊಳಿಸಲು ನೆರವಾಗುತ್ತಿರುವ ಹೊಣೆ ಹೊತ್ತಿರುವ ಪವನ್ ಜಲ್ಲಾದ್ ಜೀವನದ ಸಂಕಷ್ಟಕ್ಕೆ ನೆರವಾಗಲು ನಟ ಜಗ್ಗೇಶ್ ಮುಂದಾಗಿದ್ದಾರೆ.


ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಲಿರುವ ಹ್ಯಾಂಗ್ ಮ್ಯಾನ್ ಪವನ್ ಜಲ್ಲಾದ್ ಮೂಲತಃ ಉತ್ತರ ಪ್ರದೇಶದವರು. ಅವರ ವೈಯಕ್ತಿಕ ಜೀವನದಲ್ಲಿ ಸಂಕಷ್ಟಗಳ ಸರಮಾಲೆಯೇ ಇದೆ. ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪವನ್ ಮಗಳ ಮದುವೆ ಮಾಡಿಸಲು ಪರದಾಡುತ್ತಿದ್ದಾರೆ. ಯಾವುದಾದರೂ ಒಂದು ದಾರಿ ತೋರಿಸಲು ಎಂದು ದೇವರಲ್ಲಿ ಪ್ರಾರ್ಥಿಸುತ್ತಿದ್ದಾಗ ದೇವರೇ ನನಗೆ ಗಲ್ಲಿಗೇರಿಸುವ ಕೆಲಸ ನೀಡಿದ್ದಾನೆ. ಅದರಲ್ಲಿ ಬಂದ ಹಣದಲ್ಲಿ ಮಗಳ ಮದುವೆ ಮಾಡಿಸುತ್ತೇನೆ ಎಂದು ಪವನ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದರು.

ಈ ವಿಚಾರ ನವರಸನಾಯಕ ಜಗ್ಗೇಶ್ ಕಿವಿಗೂ ಬಿದ್ದಿದೆ. ಇದೀಗ ಪವನ್ ಮಗಳ ಮದುವೆಗೆ ಆರ್ಥಿಕವಾಗಿ ನೆರವಾಗಲು ಜಗ್ಗೇಸ್ ಮುಂದೆ ಬಂದಿದ್ದಾರೆ. ರಾಕ್ಷಸರ ಸಂಹಾರ ದೇವರ ನಿಯಮ. ಆ ಕಾರ್ಯದಿಂದ ಬಂದ ಹಣದಿಂದ ನಿಮ್ಮ ಮಗಳ ಮದುವೆ ಮಾಡುವೆ ಎಂದು ಕೇಳಿ ಭಾವುಕನಾದೆ. ನೀವೇ ಆ ಪಾಪಿಗಳನ್ನು ನೇಣಿಗೇರಿಸಿದರೆ ನಾನು ಕಲೆಯಿಂದ ದುಡಿದ 1 ಲಕ್ಷ ರೂ.ಗಳನ್ನು ನಿಮಗೆ ದೇಣಿಗೆಯಾಗಿ ನಿಮ್ಮ ಮಗಳ ಮದುವೆಗೆ ನೀಡುವೆ. ಇಂದೇ ಆ ಹಣವನ್ನು ನಿಮಗಾಗಿ ಮೀಸಲಿಡುತ್ತೆನೆ’ ಎಂದು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments