Webdunia - Bharat's app for daily news and videos

Install App

ಮುಖ್ಯಂತ್ರಿ ಕುಮಾರಸ್ವಾಮಿಗೆ ಹೊಸ ಬೇಡಿಕೆಯಿಟ್ಟ ನವರಸನಾಯಕ ಜಗ್ಗೇಶ್

Webdunia
ಮಂಗಳವಾರ, 5 ಫೆಬ್ರವರಿ 2019 (10:14 IST)
ಬೆಂಗಳೂರು: ರೈತರ ಸಾಲಮನ್ನಾ ಆಯ್ತು. ಇದೀಗ ಬಡ ಮಕ್ಕಳ ಓದಿಗೆ ಸಹಾಯವಾಗಲು ವಿದ್ಯಾಸಾಲಮನ್ನಾ ಮಾಡಬೇಕು ಎಂದು ನವರಸನಾಯಕ ಜಗ್ಗೇಶ್ ಒತ್ತಾಯಿಸಿದ್ದಾರೆ.


ಬಡ ಮಕ್ಕಳು ಎಷ್ಟೋ ಜನ ವಿದ್ಯಾಭ್ಯಾಸಕ್ಕಾಗಿ ಸಾಲ ಮಾಡಿ ತೀರಿಸಲಾಗದೇ ಒದ್ದಾಡುತ್ತಿರುತ್ತಾರೆ. ಅಂತಹವರ ಸಾಲಮನ್ನಾ ಮಾಡಲು ಯೋಜನೆ ಕೈಗೊಳ್ಳಿ ಎಂದು ಜಗ್ಗೇಶ್ ಸಿಎಂ ಕುಮಾರಸ್ವಾಮಿಗೆ ಟ್ವಿಟರ್ ಮೂಲಕ ಮನವಿ ಮಾಡಿದ್ದಾರೆ.

ಸಿನಿಮಾ ನಟರ ಪರ ಪ್ರಚಾರ ಪಕ್ಕಕ್ಕಿಟ್ಟು ಬಡ ಮಕ್ಕಳ ವಿದ್ಯಾರ್ಥಿಗಳ ಸಾಲಮನ್ನಾ ಮಾಡಲು ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿ ಎಂದು ತಮ್ಮ ಅಭಿಮಾನಿಗಳಿಗೂ ಮನವಿ ಮಾಡಿದ್ದಾರೆ.

ಜಗ್ಗೇಶ್ ಈ ರೀತಿ ಬರೆದುಕೊಳ್ಳುತ್ತಿದ್ದಂತೆ ಯಾರೋ ಅವರಿಗೆ ನೀವು ಬಡಮಕ್ಕಳಿಗಾಗಿ ಏನು ಮಾಡಿದ್ದೀರಿ ಎಂದು ಕೇಳಿದ್ದಾರೆ. ಇದಕ್ಕೆ ಜಗ್ಗೇಶ್ ತಾವು ಪ್ರತಿವರ್ಷ 10 ಬಡಮಕ್ಕಳ ವಿದ್ಯಾಭ್ಯಾಸಕ್ಕೆ ನೆರವಾಗುತ್ತಿರುವುದಾಗಿ ಹೇಳಿದ್ದಾರೆ. ಅಷ್ಟೇ ಅಲ್ಲದೆ, ತಮ್ಮ ನೆರವಿನಿಂದ ಓದಿದ ಕೆಲವರು ಇಂದು ಪದವಿ ಮುಗಿಸಿರುವ ಬಗ್ಗೆ ಹೆಮ್ಮೆಯಿಂದಲೇ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments